ಮಡಿಕೇರಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದಿರುವ ಅತಿಥಿ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಉಪನ್ಯಾಸಕರಿಗೆ ಈಗಾಗಲೇ ನೀಡುತ್ತಿರುವ ಮಾಸಿಕ ₹ 11 ಸಾವಿರ ಸಾಲದು. ಅದನ್ನು ₹30 ಸಾವಿರಕ್ಕೆ ಏರಿಸಬೇಕು. ವೇತನವನ್ನು ಪ್ರತಿ ತಿಂಗಳ ಮೊದಲ ವಾರದಲ್ಲಿ ಪಾವತಿಸಬೇಕು. ಜತೆಗೆ, ಸೇವಾ ಭದ್ರತೆ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ಎಂ.ಎ.ಶ್ಯಾಂ ಪ್ರಸಾದ್ ಅವರು ಮುಖ್ಯಮಂತ್ರಿ ಅವರಲ್ಲಿ ಕೋರಿದರು.