‘ಮಂಡ್ಯ ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾದ ಈ ಯುವತಿಯು ತನ್ನ ನಾಲ್ವರು ಸ್ನೇಹಿತರೊಂದಿಗೆ ಮಡಿಕೇರಿಗೆ ಪ್ರವಾಸಕ್ಕಾಗಿ ಬಂದಿದ್ದರು. ಈ ವೇಳೆ ಸ್ನೇಹಿತರೊಂದಿಗೆ ತಾನು ಹಣ ಇಲ್ಲದಿದ್ದರೂ ಊರು ತಲುಪುತ್ತೇನೆ ಎಂದು ಬೆಟ್ಟಿಂಗ್ ಕಟ್ಟಿ, ಕಾರಿನಿಂದಿಳಿದು ಹೊರಟರು. ಸಂಪಿಗೆಕಟ್ಟೆ ಸಮೀಪ ಗೂಗಲ್ ಪೇ ಮಾಡಿ ಅಂಗಡಿಯೊಂದರ ಮಾಲೀಕರಿಂದ ₹ 500 ನಗದು ಪಡೆದು, ಬಸ್ನಲ್ಲಿ ಹೊರಡಲು ಸಿದ್ಧವಾಗಿದ್ದರು. ಈ ವೇಳೆ ಯುವತಿಯನ್ನು ಹುಡುಕುತ್ತ ಬಂದ ಸ್ನೇಹಿತರು ಆಕೆಯನ್ನು ಎಳೆದೊಯ್ದರು. ಇದು ಸಾರ್ವಜನಿಕರಿಗೆ ಅಪಹರಣದಂತೆ ಕಂಡಿತು’ ಎಂದು ಪೊಲೀಸರು ತಿಳಿಸಿದ್ದಾರೆ.