<p><strong>ಮಡಿಕೇರಿ:</strong> ರಸ್ತೆಯನ್ನು ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಮರಗೋಡು ಗ್ರಾಮಸ್ಥರು ಹಾಗೂ ಮರಗೋಡು ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಕಾರ್ಯಕರ್ತರು ಶುಕ್ರವಾರ ಮರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚಾರ ವ್ಯತ್ಯಯವಾಯಿತು. ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮರಗೋಡು–ಹುಲಿತಾಳ–ಮಡಿಕೇರಿ ರಸ್ತೆ ಸಂಚಾರ ತಡೆದ ಅವರು ‘ನಮಗೆ ಉತ್ತಮ ರಸ್ತೆ ಬೇಕು’ ಎಂದು ಆಗ್ರಹಿಸಿದರು. ಘೋಷಣೆಗಳನ್ನು ಮೊಳಗಿಸಿದರು.</p>.<p>ಮರಗೋಡು ಸಂಪರ್ಕಿಸುವ ಬಹುತೇಕ ಎಲ್ಲ ರಸ್ತೆಗಳೂ ಗುಂಡಿ ಬಿದ್ದಿವೆ. ಡಾಂಬರು ಕಂಡು ದಶಕಗಳೇ ಕಳೆದಿವೆ. ಮಳೆ ನಿಂತು ಹಲವು ಕಾಲವೇ ಆಗಿದೆ. ಹಾಗಿದ್ದರೂ, ರಸ್ತೆ ದುರಸ್ಥಿ ಕಾರ್ಯ ನಡೆದಿಲ್ಲ ಎಂದು ಅವರು ಕಿಡಿಕಾರಿದರು.</p>.<p>ರಸ್ತೆ ಹಾಳಾಗಿರುವುದರಿಂದ ವಾಹನಗಳ ನಿರ್ವಹಣಾ ವೆಚ್ಚ ದಿನೇ ದಿನೇ ಹೆಚ್ಚಾಗುತ್ತಿದೆ. ಈಗ ಪಡೆಯುತ್ತಿರುವ ಬಾಡಿಗೆಯಿಂದ ಈ ನಿರ್ವಹಣಾ ಶುಲ್ಕ ಭರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗೀ, ಕೂಡಲೇ ಸಂಪೂರ್ಣ ರಸ್ತೆ ದುರಸ್ಥಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ಯಾವುದೇ ಕಾರಣಕ್ಕೂ ನಮಗೆ ಗುಂಡಿ ಮುಚ್ಚುವುದು ಬೇಡ. ಸಂಪೂರ್ಣ ಹೊಸ ರಸ್ತೆಯೇ ಬೇಕು’ ಎಂದು ಮನವಿ ಮಾಡಿದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<p>ಸಂಘದ ಅಧ್ಯಕ್ಷ ನಂದಕುಮಾರ್ ಮಾತನಾಡಿ, ‘ರಸ್ತೆ ತೀರಾ ಹದಗೆಟ್ಟಿರುವುದರಿಂದ ಆಂಬುಲೆನ್ಸ್ ಬರಲು ಸಾಧ್ಯವಾಗುತ್ತಿಲ್ಲ. ಭೂಮಿಪೂಜೆ ಮಾತ್ರವೇ ಆಗಿದೆ. ಕಾಮಗಾರಿ ಮಾತ್ರ ಶುರುವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡ ಇಟ್ಟಣಿಕೆ ನವನೀತ್ ಮಾತನಾಡಿ, ‘ನಿತ್ಯ ಸಾವಿರಕ್ಕೂ ಅಧಿಕ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೂ ರಸ್ತೆಯ ಅಭಿವೃದ್ಧಿ ಕಡೆಗೆ ಯಾರೊಬ್ಬರೂ ಗಮನ ಹರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ರಸ್ತೆಯನ್ನು ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಮರಗೋಡು ಗ್ರಾಮಸ್ಥರು ಹಾಗೂ ಮರಗೋಡು ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಕಾರ್ಯಕರ್ತರು ಶುಕ್ರವಾರ ಮರಗೋಡು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚಾರ ವ್ಯತ್ಯಯವಾಯಿತು. ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮರಗೋಡು–ಹುಲಿತಾಳ–ಮಡಿಕೇರಿ ರಸ್ತೆ ಸಂಚಾರ ತಡೆದ ಅವರು ‘ನಮಗೆ ಉತ್ತಮ ರಸ್ತೆ ಬೇಕು’ ಎಂದು ಆಗ್ರಹಿಸಿದರು. ಘೋಷಣೆಗಳನ್ನು ಮೊಳಗಿಸಿದರು.</p>.<p>ಮರಗೋಡು ಸಂಪರ್ಕಿಸುವ ಬಹುತೇಕ ಎಲ್ಲ ರಸ್ತೆಗಳೂ ಗುಂಡಿ ಬಿದ್ದಿವೆ. ಡಾಂಬರು ಕಂಡು ದಶಕಗಳೇ ಕಳೆದಿವೆ. ಮಳೆ ನಿಂತು ಹಲವು ಕಾಲವೇ ಆಗಿದೆ. ಹಾಗಿದ್ದರೂ, ರಸ್ತೆ ದುರಸ್ಥಿ ಕಾರ್ಯ ನಡೆದಿಲ್ಲ ಎಂದು ಅವರು ಕಿಡಿಕಾರಿದರು.</p>.<p>ರಸ್ತೆ ಹಾಳಾಗಿರುವುದರಿಂದ ವಾಹನಗಳ ನಿರ್ವಹಣಾ ವೆಚ್ಚ ದಿನೇ ದಿನೇ ಹೆಚ್ಚಾಗುತ್ತಿದೆ. ಈಗ ಪಡೆಯುತ್ತಿರುವ ಬಾಡಿಗೆಯಿಂದ ಈ ನಿರ್ವಹಣಾ ಶುಲ್ಕ ಭರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗೀ, ಕೂಡಲೇ ಸಂಪೂರ್ಣ ರಸ್ತೆ ದುರಸ್ಥಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ಯಾವುದೇ ಕಾರಣಕ್ಕೂ ನಮಗೆ ಗುಂಡಿ ಮುಚ್ಚುವುದು ಬೇಡ. ಸಂಪೂರ್ಣ ಹೊಸ ರಸ್ತೆಯೇ ಬೇಕು’ ಎಂದು ಮನವಿ ಮಾಡಿದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<p>ಸಂಘದ ಅಧ್ಯಕ್ಷ ನಂದಕುಮಾರ್ ಮಾತನಾಡಿ, ‘ರಸ್ತೆ ತೀರಾ ಹದಗೆಟ್ಟಿರುವುದರಿಂದ ಆಂಬುಲೆನ್ಸ್ ಬರಲು ಸಾಧ್ಯವಾಗುತ್ತಿಲ್ಲ. ಭೂಮಿಪೂಜೆ ಮಾತ್ರವೇ ಆಗಿದೆ. ಕಾಮಗಾರಿ ಮಾತ್ರ ಶುರುವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡ ಇಟ್ಟಣಿಕೆ ನವನೀತ್ ಮಾತನಾಡಿ, ‘ನಿತ್ಯ ಸಾವಿರಕ್ಕೂ ಅಧಿಕ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೂ ರಸ್ತೆಯ ಅಭಿವೃದ್ಧಿ ಕಡೆಗೆ ಯಾರೊಬ್ಬರೂ ಗಮನ ಹರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>