ಗೋಣಿಕೊಪ್ಪಲು: ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿದ ಇಲ್ಲಿನ ಕೈಕೇರಿಯ ನಿವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಪಡಿಕಲ್ ಕುಸುಮಾವತಿ ಅವರು ಹಲವು ಪ್ರಶಸ್ತಿ ಪಡೆದಿದ್ದಾರೆ.
ಮಂಗಳೂರಿನಲ್ಲಿ ನಡೆದ 40ರ ವಯೋಮಾನದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಕುಸುಮಾವತಿ ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದರು. 10 ಕಿ.ಮೀ ಹಾಗೂ 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರು. 400 ಮೀಟರ್ ರಿಲೆಯಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದರು.
ಹೊಸಕೋಟೆಯಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ಸ್ನ 10 ಕಿ.ಮೀ. ಓಟದಲ್ಲಿ ಪ್ರಥಮ, 5 ಸಾವಿರ ಮೀಟರ್ ಓಟದಲ್ಲಿ ಮತ್ತು 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರು. ವಿಜಯಪುರ, ಹುಬ್ಬಳ್ಳಿಯಲ್ಲಿಯೂ ನಡೆದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು.