‘ಸ್ವಾತಂತ್ರ್ಯ ಪಡೆದ ನಂತರ ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು ತನ್ನದೇ ಸರ್ಕಾರವನ್ನೂ ಹೊಂದಿತ್ತು. ಪ್ರತ್ಯೇಕ ಲೋಕಸಭಾ ಮತ್ತು ರಾಜ್ಯಸಭಾ ಸ್ಥಾನಗಳನ್ನೂ ಪಡೆದಿತ್ತು. ಅದನ್ನು ಪ್ರತ್ಯೇಕ ರಾಜ್ಯವಾಗಿ ಉಳಿಸಿಕೊಳ್ಳಲು ಆಗಲಿಲ್ಲ. ಅದಕ್ಕೆ ರಾಜಕೀಯ ಕಾರಣಗಳನ್ನು ಈಗ ಹುಡುಕದೆ, ಪ್ರತ್ಯೇಕ ಲೋಕಸಭಾ ಸ್ಥಾನಕ್ಕಾಗಿ ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡಬೇಕು’ ಎಂದು ಅವರು ಇಲ್ಲಿ ಮಂಗಳವಾರ ಕರೆ ನೀಡಿದರು.