<p>ಕುಶಾಲನಗರ: ‘ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ಬರಬೇಕು. ತಮಿಳುನಾಡು ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಬೇಕು’ ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾವೇರಿ ವ್ಯಾಜ್ಯದಲ್ಲಿ ಹಳೆಯ ತೀರ್ಮಾನಗಳನ್ನು ಒಪ್ಪಲು ಸಾಧ್ಯವಿಲ್ಲ. ಇದರಿಂದ ರಾಜ್ಯಕ್ಕೆ ರಾಜ್ಯದ ರೈತರಿಗೆ ನೀರಿನ ಕಂಟಕ ಉಂಟಾಗಿದೆ. ಪ್ರತಿಭಟನೆಯಿಂದ, ಭಾಷಣದಿಂದ ಅಥವಾ ಟೀಕೆಗಳಿಂದ ಕಾವೇರಿ ವ್ಯಾಜ್ಯಕ್ಕೆ ಪರಿಹಾರ ಸಾಧ್ಯವಿಲ್ಲ. ಸ್ವಾಮೀಜಿಗಳು ನಮ್ಮ ಸಮಸ್ಯೆಯ ಬಗ್ಗೆ ರಿಟ್ ಸಲ್ಲಿಸುವ ಮೂಲಕ ಸಮಸ್ಯೆಗೆ ಪರಿಹಾರ ಸಾಧ್ಯ’ ಎಂದರು.</p>.<p>‘ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಮಿತಿ ಹಿರಿಯ ನಿವೃತ್ತ ಅಧಿಕಾರಿಗಳು ತಜ್ಞರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಸ ಮಾಡಿ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸುತ್ತದೆ. ನಂತರ ಸುಪ್ರೀಂಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸುತ್ತದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಾವೇರಿ ನೀರಿನ ವ್ಯಾಜ್ಯದಿಂದ ಕುಡಿಯುವ ನೀರಿಗೆ ಕೂಡ ಹಾಹಾಕಾರ ಉಂಟಾಗಿದೆ’ ಎಂದು ಸ್ವಾಮೀಜಿ ಹೇಳಿದರು.</p>.<p>ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಕೆ.ರಾಮು ಮಾತನಾಡಿ, ‘ಕೊಡಗು ಜಿಲ್ಲೆಗೆ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳಿಂದ ತಜ್ಞರ ಸಮಿತಿ ಭೇಟಿ ನೀಡಿ ನದಿಯ ವಾಸ್ತವ ಸ್ಥಿತಿಗತಿಯ ಸಮಗ್ರ ಮಾಹಿತಿ ಕಲೆಹಾಕಿದೆ. ಅಲ್ಲದೆ ಮೈಸೂರು ಮಂಡ್ಯ ಭಾಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಂಕಿ ಅಂಶಗಳೊಂದಿಗೆ ಸದ್ಯದಲ್ಲಿಯೇ ಅರ್ಜಿಯನ್ನು ಕೋರ್ಟಿಗೆ ಸಲ್ಲಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ನಿಯೋಗದೊಂದಿಗೆ ಜಿಲ್ಲೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮೈಸೂರು ಶಾಖಾ ಮಠಾಧೀಶ ಸೋಮನಾಥೇಶ್ವರ ಸ್ವಾಮೀಜಿ ಮಾತನಾಡಿ, ‘ರಾಜ್ಯದಲ್ಲಿ ಕಾವೇರಿ ನದಿ ಹರಿಯುವ ಸ್ಥಳಗಳಿಗೆ ಭೇಟಿ ನೀಡಿ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಕಾವೇರಿ ನದಿ ರಕ್ಷಣಾ ಸಮಿತಿ ಸುಪ್ರೀಂಕೋರ್ಟಿಗೆ ಸಮಗ್ರ ಮಾಹಿತಿ ನೀಡಲಿದೆ’ ಎಂದು ಹೇಳಿದರು.</p>.<p>ತಜ್ಞರ ಸಮಿತಿಯ ಮೂಲಕ ಕಾವೇರಿ ಜಲಾನಯನ ಪ್ರದೇಶಗಳ ರೈತರ ಸ್ಥಿತಿಗತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಅವಲೋಕಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಯತ್ನ ನಡೆಯಲಿದೆ. ಕೊಡಗು ಜಿಲ್ಲೆಗೆ ಭೇಟಿ ನೀಡಿದ ತಂಡ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಂತರ ಜಲಾನಯನ ಪ್ರದೇಶಗಳಲ್ಲಿ ಮತ್ತು ಹಾರಂಗಿ ಅಣೆಕಟ್ಟು ಪ್ರದೇಶಗಳಲ್ಲಿ ವೀಕ್ಷಣೆ ನಡೆಸಿದೆ ಎಂದು ಹೇಳಿದರು.</p>.<p>ಬೆಟ್ಟದಪುರ ಕನ್ನಡ ಮಠಾಧೀಶ ಚನ್ನಬಸವ ಸ್ವಾಮೀಜಿ ಸಮಿತಿಯ ಹೋರಾಟಕ್ಕೆ ಯಶಸ್ಸು ಕೋರಿದರು. ಹಿರಿಯ ಸಾಹಿತಿಗಳು ಪ್ರಧಾನ ಗುರುದತ್ ಮಾತನಾಡಿ, ‘ರಾಜ್ಯದ ಪರವಾಗಿ ಸಮರ್ಪಕ ವಾದವಾಗದೆ ನೀರಿನ ಪಾಲಿನಲ್ಲಿ ಅನ್ಯಾಯ ಉಂಟಾಗಿದೆ ಎಂದರಲ್ಲದೆ ರಾಜಕೀಯ ಪಕ್ಷಗಳು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿವೆ’ ಎಂದರು.</p>.<p>ಕಾವೇರಿ ನದಿ ರಕ್ಷಣಾ ಸಮಿತಿಯ ಪ್ರಮುಖರು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಅವರನ್ನು ಸನ್ಮಾನಿಸಿದರು.</p>.<p>ಜಿಲ್ಲೆಗೆ ಭೇಟಿ ನೀಡಿದ ಸುಮಾರು ಐವತ್ತಕ್ಕೂ ಅಧಿಕ ಸಂಘ ಸಂಸ್ಥೆಗಳ ಪ್ರಮುಖರು ಮಂಗಳವಾರ ಬೆಳಗ್ಗೆ ತಲಕಾವೇರಿ ಕ್ಷೇತ್ರಕ್ಕೆ ತೆರಳಿ ಪೂಜೆ ನೆರವೇರಿಸಿ ರಾಜ್ಯದ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ವಿವಿಧ ಶಾಖಾ ಮಠಾಧೀಶರು, ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ. ಚಂದ್ರು, ಖಜಾಂಚಿ ಸಿ ಜಗದೀಶ್, ಉಪಾಧ್ಯಕ್ಷರಾದ ಪ್ರಶಾಂತ್, ಅಂದಾನಪ್ಪ ಮಾಲತೇಶ್ ಎಚ್.ಎನ್.ರಾಜು, ಅರುಣ, ಮಾಜಿ ಮೇಯರ್ ಪ್ರಕಾಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-51-1748076606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ‘ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ಬರಬೇಕು. ತಮಿಳುನಾಡು ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಬೇಕು’ ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾವೇರಿ ವ್ಯಾಜ್ಯದಲ್ಲಿ ಹಳೆಯ ತೀರ್ಮಾನಗಳನ್ನು ಒಪ್ಪಲು ಸಾಧ್ಯವಿಲ್ಲ. ಇದರಿಂದ ರಾಜ್ಯಕ್ಕೆ ರಾಜ್ಯದ ರೈತರಿಗೆ ನೀರಿನ ಕಂಟಕ ಉಂಟಾಗಿದೆ. ಪ್ರತಿಭಟನೆಯಿಂದ, ಭಾಷಣದಿಂದ ಅಥವಾ ಟೀಕೆಗಳಿಂದ ಕಾವೇರಿ ವ್ಯಾಜ್ಯಕ್ಕೆ ಪರಿಹಾರ ಸಾಧ್ಯವಿಲ್ಲ. ಸ್ವಾಮೀಜಿಗಳು ನಮ್ಮ ಸಮಸ್ಯೆಯ ಬಗ್ಗೆ ರಿಟ್ ಸಲ್ಲಿಸುವ ಮೂಲಕ ಸಮಸ್ಯೆಗೆ ಪರಿಹಾರ ಸಾಧ್ಯ’ ಎಂದರು.</p>.<p>‘ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಮಿತಿ ಹಿರಿಯ ನಿವೃತ್ತ ಅಧಿಕಾರಿಗಳು ತಜ್ಞರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಸ ಮಾಡಿ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸುತ್ತದೆ. ನಂತರ ಸುಪ್ರೀಂಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸುತ್ತದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಾವೇರಿ ನೀರಿನ ವ್ಯಾಜ್ಯದಿಂದ ಕುಡಿಯುವ ನೀರಿಗೆ ಕೂಡ ಹಾಹಾಕಾರ ಉಂಟಾಗಿದೆ’ ಎಂದು ಸ್ವಾಮೀಜಿ ಹೇಳಿದರು.</p>.<p>ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಕೆ.ರಾಮು ಮಾತನಾಡಿ, ‘ಕೊಡಗು ಜಿಲ್ಲೆಗೆ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳಿಂದ ತಜ್ಞರ ಸಮಿತಿ ಭೇಟಿ ನೀಡಿ ನದಿಯ ವಾಸ್ತವ ಸ್ಥಿತಿಗತಿಯ ಸಮಗ್ರ ಮಾಹಿತಿ ಕಲೆಹಾಕಿದೆ. ಅಲ್ಲದೆ ಮೈಸೂರು ಮಂಡ್ಯ ಭಾಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಂಕಿ ಅಂಶಗಳೊಂದಿಗೆ ಸದ್ಯದಲ್ಲಿಯೇ ಅರ್ಜಿಯನ್ನು ಕೋರ್ಟಿಗೆ ಸಲ್ಲಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ನಿಯೋಗದೊಂದಿಗೆ ಜಿಲ್ಲೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮೈಸೂರು ಶಾಖಾ ಮಠಾಧೀಶ ಸೋಮನಾಥೇಶ್ವರ ಸ್ವಾಮೀಜಿ ಮಾತನಾಡಿ, ‘ರಾಜ್ಯದಲ್ಲಿ ಕಾವೇರಿ ನದಿ ಹರಿಯುವ ಸ್ಥಳಗಳಿಗೆ ಭೇಟಿ ನೀಡಿ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಕಾವೇರಿ ನದಿ ರಕ್ಷಣಾ ಸಮಿತಿ ಸುಪ್ರೀಂಕೋರ್ಟಿಗೆ ಸಮಗ್ರ ಮಾಹಿತಿ ನೀಡಲಿದೆ’ ಎಂದು ಹೇಳಿದರು.</p>.<p>ತಜ್ಞರ ಸಮಿತಿಯ ಮೂಲಕ ಕಾವೇರಿ ಜಲಾನಯನ ಪ್ರದೇಶಗಳ ರೈತರ ಸ್ಥಿತಿಗತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಅವಲೋಕಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಯತ್ನ ನಡೆಯಲಿದೆ. ಕೊಡಗು ಜಿಲ್ಲೆಗೆ ಭೇಟಿ ನೀಡಿದ ತಂಡ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಂತರ ಜಲಾನಯನ ಪ್ರದೇಶಗಳಲ್ಲಿ ಮತ್ತು ಹಾರಂಗಿ ಅಣೆಕಟ್ಟು ಪ್ರದೇಶಗಳಲ್ಲಿ ವೀಕ್ಷಣೆ ನಡೆಸಿದೆ ಎಂದು ಹೇಳಿದರು.</p>.<p>ಬೆಟ್ಟದಪುರ ಕನ್ನಡ ಮಠಾಧೀಶ ಚನ್ನಬಸವ ಸ್ವಾಮೀಜಿ ಸಮಿತಿಯ ಹೋರಾಟಕ್ಕೆ ಯಶಸ್ಸು ಕೋರಿದರು. ಹಿರಿಯ ಸಾಹಿತಿಗಳು ಪ್ರಧಾನ ಗುರುದತ್ ಮಾತನಾಡಿ, ‘ರಾಜ್ಯದ ಪರವಾಗಿ ಸಮರ್ಪಕ ವಾದವಾಗದೆ ನೀರಿನ ಪಾಲಿನಲ್ಲಿ ಅನ್ಯಾಯ ಉಂಟಾಗಿದೆ ಎಂದರಲ್ಲದೆ ರಾಜಕೀಯ ಪಕ್ಷಗಳು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿವೆ’ ಎಂದರು.</p>.<p>ಕಾವೇರಿ ನದಿ ರಕ್ಷಣಾ ಸಮಿತಿಯ ಪ್ರಮುಖರು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಅವರನ್ನು ಸನ್ಮಾನಿಸಿದರು.</p>.<p>ಜಿಲ್ಲೆಗೆ ಭೇಟಿ ನೀಡಿದ ಸುಮಾರು ಐವತ್ತಕ್ಕೂ ಅಧಿಕ ಸಂಘ ಸಂಸ್ಥೆಗಳ ಪ್ರಮುಖರು ಮಂಗಳವಾರ ಬೆಳಗ್ಗೆ ತಲಕಾವೇರಿ ಕ್ಷೇತ್ರಕ್ಕೆ ತೆರಳಿ ಪೂಜೆ ನೆರವೇರಿಸಿ ರಾಜ್ಯದ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ವಿವಿಧ ಶಾಖಾ ಮಠಾಧೀಶರು, ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ. ಚಂದ್ರು, ಖಜಾಂಚಿ ಸಿ ಜಗದೀಶ್, ಉಪಾಧ್ಯಕ್ಷರಾದ ಪ್ರಶಾಂತ್, ಅಂದಾನಪ್ಪ ಮಾಲತೇಶ್ ಎಚ್.ಎನ್.ರಾಜು, ಅರುಣ, ಮಾಜಿ ಮೇಯರ್ ಪ್ರಕಾಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-51-1748076606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>