<p><strong>ಸಿದ್ದಾಪುರ</strong>: ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನಂದಪುರದಲ್ಲಿ ಈಶ್ವರ ದೇವಾಲಯದ ಕಾಮಗಾರಿ ನಡೆದಾಗ ಚಿನ್ನಾಭರಣ ಹೋಲುವ ವಸ್ತುಗಳು ಪತ್ತೆಯಾಗಿವೆ.</p>.<p>ಆನಂದಪುರದ ಟಾಟಾ ಸಂಸ್ಥೆಯ ಈಶ್ವರ ದೇವಾಲಯದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಕಾರ್ಮಿಕರಾದ ಸುಬ್ರಮಣಿ ಹಾಗೂ ಇತರರು ಕೆಲಸ ಮಾಡುತ್ತಿದ್ದರು. ಈ ವೇಳೆ ಮಣ್ಣಿನ ಅಡಿಯಿಂದ ಎರಡು ಡಬ್ಬಗಳು ಪತ್ತೆಯಾಗಿವೆ. ಕಾರ್ಮಿಕರು ಕೂಡಲೇ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಎರಡು ಡಬ್ಬಗಳಲ್ಲಿ ಚಿನ್ನಾಭರಣಗಳ ಲೋಹ ಪತ್ತೆಯಾಗಿದೆ. ಅಂದಾಜು 900 ಗ್ರಾಂ ಲೋಹ ಪತ್ತೆಯಾಗಿದ್ದು, ಕಂದಾಯ ಅಧಿಕಾರಿಗಳು ಮಣ್ಣಿನಿಂದ ದೊರೆತ ಲೋಹವನ್ನು ತಾಲ್ಲೂಕು ಖಜಾನೆಗೆ ಕೊಂಡೊಯ್ದರು.</p>.<p>‘ದೊರೆತ ಲೋಹವನ್ನು ಚಿನ್ನ ಎಂಬುದು ಸ್ಪಷ್ಟವಾಗಿಲ್ಲ. ಪುರಾತತ್ವ ಇಲಾಖೆಯ ಮೂಲಕ ಜಿಲ್ಲಾಧಿಕಾರಿಗೆ ನೀಡಲಾಗುವುದು’ ಎಂದು ತಾಲ್ಲೂಕು ಉಪ ತಹಶೀಲ್ದಾರ್ ಪ್ರದೀಪ್ ತಿಳಿಸಿದರು.</p>.<p>ಈ ಸಂದರ್ಭ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಓಮಪ್ಪ ಬಣಕಾರ್, ಸಿದ್ದಾಪುರ ಪಿಎಸ್ಐ ರಾಘವೇಂದ್ರ, ಕಂದಾಯ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನಂದಪುರದಲ್ಲಿ ಈಶ್ವರ ದೇವಾಲಯದ ಕಾಮಗಾರಿ ನಡೆದಾಗ ಚಿನ್ನಾಭರಣ ಹೋಲುವ ವಸ್ತುಗಳು ಪತ್ತೆಯಾಗಿವೆ.</p>.<p>ಆನಂದಪುರದ ಟಾಟಾ ಸಂಸ್ಥೆಯ ಈಶ್ವರ ದೇವಾಲಯದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಕಾರ್ಮಿಕರಾದ ಸುಬ್ರಮಣಿ ಹಾಗೂ ಇತರರು ಕೆಲಸ ಮಾಡುತ್ತಿದ್ದರು. ಈ ವೇಳೆ ಮಣ್ಣಿನ ಅಡಿಯಿಂದ ಎರಡು ಡಬ್ಬಗಳು ಪತ್ತೆಯಾಗಿವೆ. ಕಾರ್ಮಿಕರು ಕೂಡಲೇ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಎರಡು ಡಬ್ಬಗಳಲ್ಲಿ ಚಿನ್ನಾಭರಣಗಳ ಲೋಹ ಪತ್ತೆಯಾಗಿದೆ. ಅಂದಾಜು 900 ಗ್ರಾಂ ಲೋಹ ಪತ್ತೆಯಾಗಿದ್ದು, ಕಂದಾಯ ಅಧಿಕಾರಿಗಳು ಮಣ್ಣಿನಿಂದ ದೊರೆತ ಲೋಹವನ್ನು ತಾಲ್ಲೂಕು ಖಜಾನೆಗೆ ಕೊಂಡೊಯ್ದರು.</p>.<p>‘ದೊರೆತ ಲೋಹವನ್ನು ಚಿನ್ನ ಎಂಬುದು ಸ್ಪಷ್ಟವಾಗಿಲ್ಲ. ಪುರಾತತ್ವ ಇಲಾಖೆಯ ಮೂಲಕ ಜಿಲ್ಲಾಧಿಕಾರಿಗೆ ನೀಡಲಾಗುವುದು’ ಎಂದು ತಾಲ್ಲೂಕು ಉಪ ತಹಶೀಲ್ದಾರ್ ಪ್ರದೀಪ್ ತಿಳಿಸಿದರು.</p>.<p>ಈ ಸಂದರ್ಭ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಓಮಪ್ಪ ಬಣಕಾರ್, ಸಿದ್ದಾಪುರ ಪಿಎಸ್ಐ ರಾಘವೇಂದ್ರ, ಕಂದಾಯ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>