<p><strong>ಮಡಿಕೇರಿ</strong>: ‘ಸೈನಿಕ ಶಾಲೆ ಎಂಬುದು ಕೇವಲ ಶಾಲೆಯಲ್ಲ. ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ’ ಎಂದು ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಹೇಳಿದರು.</p>.<p>ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಆಯೋಜಿಸಿದ್ದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಯಾಯ೯ಗಾರದ ಮೂಲಕ ಮಹತ್ವದ ಹೆಜ್ಜೆ ಹಾಕಿದ್ದೀರಿ. ಆಯೋಜಕ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದು ಅಭಿನಂದಿಸಿದರು.</p>.<p>ಕಾರ್ಯಕ್ರಮದಲ್ಲಿ ಏರ್ ಕಮೋಡರ್ ಜೈಸಿಂಹ, ಭಾರತೀಯ ವಾಯು ಪಡೆಗಳ ಮಹತ್ವ ಮತ್ತು ಈ ಸೇನಾ ಪಡೆಗಳಿಗೆ ಸೇರ್ಪಡೆ ಸಂಬಂಧಿತ ಮಾಹಿತಿ ನೀಡಿದರು.</p>.<p>ಸರಗೂರು ಸೈನಿಕ ಶಾಲೆಯ ಆಡಳಿತ ಮಂಡಳಿ ಪ್ರಮುಖ ಪ್ರವೀಣ್ ಮಾತನಾಡಿದರು. ಕುನಾಲ್ ಕಡ್ತರೆ ಮತ್ತು ಪ್ರವೀಣ್ ಕಡ್ತರೆ, ಗಣಿತ ಮತ್ತು ಸಾಮಾಜಿಕ ಜ್ಞಾನದ ವಿಷಯ ಮಾಹಿತಿ ನೀಡಿದರು.</p>.<p>ಸಂಚಾಲಕ ರೋಟರಿ ಮಿಸ್ಟಿ ಹಿಲ್ಸ್ನ ಚೆರಿಯಮನೆ ಪ್ರಶಾಂತ್ ಮಾತನಾಡಿ, ‘ಮುಂದಿನ 10 ಭಾನುವಾರಗಳಂದು ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದರು.</p>.<p>ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ನಿರ್ದೇಶಕರಾದ ಬಿ.ಕೆ.ರವಿಂದ್ರ ರೈ, ಪ್ರಸಾದ್ ಗೌಡ, ಪ್ರಕಾಶ್ ಪೂವಯ್ಯ, ಪಿ.ವಿ.ಅಶೋಕ್ ಹಾಜರಿದ್ದರು.<br /><br /><br /></p>.<p>Cut-off box - ಅರ್ಜಿ ಸಲ್ಲಿಕೆ: 9ರಂದು ಕೊನೆ ದಿನ ಸೈನಿಕಶಾಲೆಗಳಿಗೆ 6 ಮತ್ತು 9 ನೇ ತರಗತಿಗೆ ಸೇರ್ಪಡೆಯಾಗಲು ಅರ್ಜಿ ಸಲ್ಲಿಸಲು ನ.9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅ.30ಕ್ಕೆ ಕೊನೆಗೊಂಡಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ನ.9 ರವರೆಗೆ ವಿಸ್ತರಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಎಸ್.ವಿ.ವೈ.ಎಂ. ಪ್ರಮುಖರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಸೈನಿಕ ಶಾಲೆ ಎಂಬುದು ಕೇವಲ ಶಾಲೆಯಲ್ಲ. ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ’ ಎಂದು ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಹೇಳಿದರು.</p>.<p>ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಆಯೋಜಿಸಿದ್ದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಯಾಯ೯ಗಾರದ ಮೂಲಕ ಮಹತ್ವದ ಹೆಜ್ಜೆ ಹಾಕಿದ್ದೀರಿ. ಆಯೋಜಕ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದು ಅಭಿನಂದಿಸಿದರು.</p>.<p>ಕಾರ್ಯಕ್ರಮದಲ್ಲಿ ಏರ್ ಕಮೋಡರ್ ಜೈಸಿಂಹ, ಭಾರತೀಯ ವಾಯು ಪಡೆಗಳ ಮಹತ್ವ ಮತ್ತು ಈ ಸೇನಾ ಪಡೆಗಳಿಗೆ ಸೇರ್ಪಡೆ ಸಂಬಂಧಿತ ಮಾಹಿತಿ ನೀಡಿದರು.</p>.<p>ಸರಗೂರು ಸೈನಿಕ ಶಾಲೆಯ ಆಡಳಿತ ಮಂಡಳಿ ಪ್ರಮುಖ ಪ್ರವೀಣ್ ಮಾತನಾಡಿದರು. ಕುನಾಲ್ ಕಡ್ತರೆ ಮತ್ತು ಪ್ರವೀಣ್ ಕಡ್ತರೆ, ಗಣಿತ ಮತ್ತು ಸಾಮಾಜಿಕ ಜ್ಞಾನದ ವಿಷಯ ಮಾಹಿತಿ ನೀಡಿದರು.</p>.<p>ಸಂಚಾಲಕ ರೋಟರಿ ಮಿಸ್ಟಿ ಹಿಲ್ಸ್ನ ಚೆರಿಯಮನೆ ಪ್ರಶಾಂತ್ ಮಾತನಾಡಿ, ‘ಮುಂದಿನ 10 ಭಾನುವಾರಗಳಂದು ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದರು.</p>.<p>ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ನಿರ್ದೇಶಕರಾದ ಬಿ.ಕೆ.ರವಿಂದ್ರ ರೈ, ಪ್ರಸಾದ್ ಗೌಡ, ಪ್ರಕಾಶ್ ಪೂವಯ್ಯ, ಪಿ.ವಿ.ಅಶೋಕ್ ಹಾಜರಿದ್ದರು.<br /><br /><br /></p>.<p>Cut-off box - ಅರ್ಜಿ ಸಲ್ಲಿಕೆ: 9ರಂದು ಕೊನೆ ದಿನ ಸೈನಿಕಶಾಲೆಗಳಿಗೆ 6 ಮತ್ತು 9 ನೇ ತರಗತಿಗೆ ಸೇರ್ಪಡೆಯಾಗಲು ಅರ್ಜಿ ಸಲ್ಲಿಸಲು ನ.9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅ.30ಕ್ಕೆ ಕೊನೆಗೊಂಡಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ನ.9 ರವರೆಗೆ ವಿಸ್ತರಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಎಸ್.ವಿ.ವೈ.ಎಂ. ಪ್ರಮುಖರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>