ಮಡಿಕೇರಿ: ‘ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಸಂಪುಟ ಪುನರ್ ರಚನೆಯಲ್ಲಿ ಅವಕಾಶ ನೀಡಬೇಕು’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಶುಕ್ರವಾರ ಇಲ್ಲಿ ಆಗ್ರಹಿಸಿದರು.
‘ನಾಲ್ಕು ಬಾರಿ ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ನಾನು, ಉಮೇಶ್ ಕತ್ತಿ ಹಲವು ಬಾರಿ ಗೆದ್ದಿದ್ದೇವೆ. ನಮಗೂ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯ ಮುಖಂಡರು ನೀಡಿರುವ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸುವುದಿಲ್ಲ. ಹಿಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದಿಂದ ಕಳುಹಿಸಿದ್ದ ಪಟ್ಟಿಗೆ ಮನ್ನಣೆ ಸಿಕ್ಕಿಲ್ಲ. ಹೈಕಮಾಂಡ್, ಈಗಲೂ ಮೂಲ ಬಿಜೆಪಿ ಶಾಸಕರನ್ನು ಕೈಬಿಡದೇ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಕ್ರಿಯಿಸಿದರು.