ಉಳಿದಂತೆ ಸೋಮಸುಂದರ ಅವರು, ‘ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ 39ರಷ್ಟು ಮಳೆ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ 67ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.