ಕೊಡವ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ, ಉಪಾಧ್ಯಕ್ಷ ಬೆಳ್ಳಿಯಪ್ಪ, ಕಾರ್ಯದರ್ಶಿ ರಾಕೇಶ್ ಪೋವಯ್ಯ, ಖಜಾಂಚಿ ಕೆ.ಎನ್.ಉತ್ತಪ್ಪ, ರಾಜಾ ನಂಜಪ್ಪ, ಪ್ರಾಂಶುಪಾಲ ಪ್ರೊ.ಬಸವರಾಜು, ಕೃಷಿ ಮೇಳ ಸಂಚಾಲಕಿ ರೋಹಿಣಿ ತಿಮ್ಮಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಲೀಲಾವತಿ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೃಷಿ ಇಲಾಖೆ ನಿರ್ದೇಶಕ ಜಿ.ಟಿ.ಪುತ್ರ ಹಾಜರಿದ್ದರು.
ಬಳಿಕ ಕಾಲೇಜಿನ ಪಕ್ಕದಲ್ಲಿಯೇ ಇರುವ ಕೃಷಿ ಪ್ರಶಸ್ತಿ ವಿಜೇತ ರವಿಶಂಕರ್ ಅವರ ಭತ್ತ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಿ 32 ಬಗೆಯ ಭತ್ತದ ತಳಿ ಬೆಳೆ ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.