<p><strong>ಮಡಿಕೇರಿ:</strong> ಶಾಸಕರ ಸಮಸ್ಯೆಗಳಿಗೆ ಸಚಿವರು ಸ್ಪಂದಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ಇಲ್ಲಿ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಶಾಸಕರು ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ನನಗೇನೂ ಗೊತ್ತಿಲ್ಲ. ಆದರೆ, ಶಾಸಕರ ಸಮಸ್ಯೆಗಳಿಗೆ ಸಚಿವರು ಸ್ಪಂದಿಸಬೇಕು ಎಂಬ ಮಾತನ್ನು ಹೇಳುತ್ತೇನೆ’ ಎಂದರು.</p><p>ಜಿಯೊಲಜಿಕಲ್ ಸರ್ವೇ ಆಫ್ ಇಂಡಿಯಾ (ಜಿಎಸ್ಐ)ದವರು ಈಗಾಗಲೆ ಕೊಡಗಿನಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಬಹುದು ಎಂಬ ಸ್ಥಳಗಳ ಪಟ್ಟಿ ಕೊಟ್ಟಿದ್ದಾರೆ. ಇಲ್ಲಿ ಭೂಕುಸಿತ ಸಂಭವಿಸದಂತೆ ತಡೆಯಲು ₹ 15ರಿಂದ ₹ 20 ಕೋಟಿ ಹಣ ನೀಡಲು ಸಿದ್ಧರಿದ್ದೇವೆ. ಈ ಕುರಿತು ಬೇಗನೇ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.</p><p>‘ಕೊಡಗು ಜಿಲ್ಲಾಧಿಕಾರಿ ಖಾತೆಯಲ್ಲಿ ₹ 56 ಕೋಟಿ ಹಣ ಇದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು ₹ 540 ಕೋಟಿ ಹಣ ಇದೆ. ಇನ್ನಷ್ಟು ಹಣ ನೀಡಲು ಸಿದ್ಧರಿದ್ದೇವೆ’ ಎಂದು ಹೇಳಿದರು.</p><p>ಪ್ರಾಕೃತಿಕ ವಿಕೋಪದಡಿ ಈ ಹಿಂದಿನ ವರ್ಷಗಳಲ್ಲಿ ನೀಡಿರುವ ಅನುದಾನ ಬಳಕೆಯಾಗದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಒಂದು ತಿಂಗಳ ಒಳಗೆ ಕೆಲಸ ಆಗಿರುವುದಕ್ಕೆ ಪರಿಶೀಲಿಸಿ ಬಿಲ್ ಪಾವತಿಸಬೇಕು. ಒಂದು ವೇಳೆ ಕಾಮಗಾರಿ ಆಗಿರದಿದ್ದರೆ ಆ ಹಣವನ್ನು ಈ ವರ್ಷದ ಪ್ರಾಕೃತಿಕ ವಿಕೋಪದಡಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಶಾಸಕರ ಸಮಸ್ಯೆಗಳಿಗೆ ಸಚಿವರು ಸ್ಪಂದಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ಇಲ್ಲಿ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>‘ಶಾಸಕರು ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ನನಗೇನೂ ಗೊತ್ತಿಲ್ಲ. ಆದರೆ, ಶಾಸಕರ ಸಮಸ್ಯೆಗಳಿಗೆ ಸಚಿವರು ಸ್ಪಂದಿಸಬೇಕು ಎಂಬ ಮಾತನ್ನು ಹೇಳುತ್ತೇನೆ’ ಎಂದರು.</p><p>ಜಿಯೊಲಜಿಕಲ್ ಸರ್ವೇ ಆಫ್ ಇಂಡಿಯಾ (ಜಿಎಸ್ಐ)ದವರು ಈಗಾಗಲೆ ಕೊಡಗಿನಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಬಹುದು ಎಂಬ ಸ್ಥಳಗಳ ಪಟ್ಟಿ ಕೊಟ್ಟಿದ್ದಾರೆ. ಇಲ್ಲಿ ಭೂಕುಸಿತ ಸಂಭವಿಸದಂತೆ ತಡೆಯಲು ₹ 15ರಿಂದ ₹ 20 ಕೋಟಿ ಹಣ ನೀಡಲು ಸಿದ್ಧರಿದ್ದೇವೆ. ಈ ಕುರಿತು ಬೇಗನೇ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.</p><p>‘ಕೊಡಗು ಜಿಲ್ಲಾಧಿಕಾರಿ ಖಾತೆಯಲ್ಲಿ ₹ 56 ಕೋಟಿ ಹಣ ಇದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು ₹ 540 ಕೋಟಿ ಹಣ ಇದೆ. ಇನ್ನಷ್ಟು ಹಣ ನೀಡಲು ಸಿದ್ಧರಿದ್ದೇವೆ’ ಎಂದು ಹೇಳಿದರು.</p><p>ಪ್ರಾಕೃತಿಕ ವಿಕೋಪದಡಿ ಈ ಹಿಂದಿನ ವರ್ಷಗಳಲ್ಲಿ ನೀಡಿರುವ ಅನುದಾನ ಬಳಕೆಯಾಗದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಒಂದು ತಿಂಗಳ ಒಳಗೆ ಕೆಲಸ ಆಗಿರುವುದಕ್ಕೆ ಪರಿಶೀಲಿಸಿ ಬಿಲ್ ಪಾವತಿಸಬೇಕು. ಒಂದು ವೇಳೆ ಕಾಮಗಾರಿ ಆಗಿರದಿದ್ದರೆ ಆ ಹಣವನ್ನು ಈ ವರ್ಷದ ಪ್ರಾಕೃತಿಕ ವಿಕೋಪದಡಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>