ಮಡಿಕೇರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ಓದುವಾಗ ‘ಹಳೆಗನ್ನಡ ಕವಿಗಳಾದ ಪಂಪ, ರನ್ನ, ಜನ್ನ, ಪೊನ್ನ, ಕುಮಾರವ್ಯಾಸ’ ಎನ್ನುವಾಗ ‘ಕುಮಾರಸ್ವಾಮಿ’ ಎಂದರು.
ಅದೇ ರೀತಿ ಕನ್ನಡ ಭಾಷೆಗೆ ಸುಮಾರು 2,000 ವರ್ಷಗಳ ಇತಿಹಾಸವಿದೆ ಎಂದು ಹೇಳುವ ಬದಲಿಗೆ 2 ವರ್ಷಗಳ ಇತಿಹಾಸವಿದೆ ಎಂದು ಓದಿದರು.