<p><strong>ಮಡಿಕೇರಿ</strong>: ಇಲ್ಲಿನ ಐತಿಹಾಸಿಕ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಮುಜಾರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶಾಸಕ ಡಾ.ಮಂತರ್ಗೌಡ ಸಮ್ಮತಿಸಿದರು.</p>.<p>ದೇಗುಲಕ್ಕೆ ಭೇಟಿ ನೀಡಿದ ಅವರನ್ನು ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜಾರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು.</p>.<p>ಇದಕ್ಕೆ ಒಪ್ಪಿದ ಮಂತರ್ಗೌಡ, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.</p>.<p>ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸಾವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು ಅವರು ತಿಳಿಸಿದರು.</p>.<p>ಸಮಿತಿಯ ಸದಸ್ಯರಾದ ಜಿ.ರಾಜೇಂದ್ರ, ಎ.ಎಸ್.ಪ್ರಕಾಶ್, ಆಂಜನೇಯ ದೇವಾಲಯದ ಅರ್ಚಕ ಎಂ.ಬಿ.ಸಂತೋಷ್ ಹಾಗೂ ಓಂಕಾರೇಶ್ವರ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಐತಿಹಾಸಿಕ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಮುಜಾರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶಾಸಕ ಡಾ.ಮಂತರ್ಗೌಡ ಸಮ್ಮತಿಸಿದರು.</p>.<p>ದೇಗುಲಕ್ಕೆ ಭೇಟಿ ನೀಡಿದ ಅವರನ್ನು ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜಾರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು.</p>.<p>ಇದಕ್ಕೆ ಒಪ್ಪಿದ ಮಂತರ್ಗೌಡ, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.</p>.<p>ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸಾವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು ಅವರು ತಿಳಿಸಿದರು.</p>.<p>ಸಮಿತಿಯ ಸದಸ್ಯರಾದ ಜಿ.ರಾಜೇಂದ್ರ, ಎ.ಎಸ್.ಪ್ರಕಾಶ್, ಆಂಜನೇಯ ದೇವಾಲಯದ ಅರ್ಚಕ ಎಂ.ಬಿ.ಸಂತೋಷ್ ಹಾಗೂ ಓಂಕಾರೇಶ್ವರ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>