ಪಂಚಾಯಿತಿ ಅಧ್ಯಕ್ಷ ಎನ್.ಟಿ. ಪರಮೇಶ್ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿ 278 ಮಂದಿ ಕೊರೊನಾ ಸೋಂಕಿಗೆ ಒಳಗಾಗಿ, 7 ಮಂದಿ ಮೃತಪಟ್ಟಿದ್ದಾರೆ. ಈಗ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಈ ವ್ಯಾಪ್ತಿಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರ ಸಹಕಾರದಿಂದಾಗಿ ಸಾಧ್ಯವಾಗಿದೆ’ ಎಂದು ಹೇಳಿದರು.