ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಗಮನಹರಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದ ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕೆ, ಆರ್ಥಿಕತೆ ಹೀಗೆ ಪ್ರತಿಯೊಂದು ಕ್ಷೇತ್ರದ ಬಗ್ಗೆಯು ಸಾಮಾನ್ಯ ಜ್ಞಾನವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ತಜ್ಞ ಹಾಗೂ ಮಾಜಿ ಸೇನಾಧಿಕಾರಿ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಮಾತನಾಡಿ, ‘ಮಕ್ಕಳಲ್ಲಿರುವ ಪ್ರತಿಭೆ ಸಮಾಜದಲ್ಲಿ ಒಬ್ಬ ಮುಖ್ಯ ವ್ಯಕ್ತಿಯನ್ನಾಗಿ ರೂಪಿಸುವ ಕೆಲಸ ಮಾಡುತ್ತದೆ. ಹಾಗಾಗಿ, ತಮ್ಮೊಳಗಿನ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಳ್ಳಬೇಕು’ ಎಂದು ಹೇಳಿದರು.