<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ದನ ರೆಡ್ಡಿ ಮಣ್ಣಿನ ಕಳ್ಳ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಶೋಕ ವೃತ್ತದಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು ‘ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಹತ್ತು ವರ್ಷದಲ್ಲಿ ತೈಲ ಬೆಲೆಯನ್ನು ನೂರು ರೂಪಾಯಿ ದಾಟಿಸಿದೆ. ಜನಾರ್ದನ ರೆಡ್ಡಿ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಆ ಪಕ್ಷದ ನಾಯಕರ ಓಲೈಕೆಗೆ ಅಬ್ಬರಿಸುತ್ತಿದ್ದಾರೆ. ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿನ ದೂಳು ಅಲ್ಲ, ಅವರ ಕಾಲಿನ ಉಗುರಿನಲ್ಲಿನ ದೂಳಿಗೂ ಸಮ ಇಲ್ಲ. ರೆಡ್ಡಿ ಅವರೇ ಇದು ಬಳ್ಳಾರಿಯಲ್ಲ, ಕೊಪ್ಪಳ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಂಗಳವಾರ ಬಿಜೆಪಿಯಿಂದ ನಡೆದಿದ್ದ ಪ್ರತಿಭಟನೆ ವೇಳೆ ರೆಡ್ಡಿ ‘ಸಾಮಾನ್ಯ ಜನರ ಬದುಕು ದಯನೀಯ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅಯೋಗ್ಯ’ ಎಂದು ಜರಿದು ಬಡವರ ಜೇಬಿಗೆ ಕತ್ತರಿ ಹಾಕುತ್ತಿರುವ ಪಿಕ್ ಪಾಕೆಟ್ ಸರ್ಕಾರ ಎಂದು ಹರಿಹಾಯ್ದಿದ್ದರು.</p>.<p>ಆದ್ದರಿಂದ ಕಾಂಗ್ರೆಸ್ ಮರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜನಾರ್ದನ ರೆಡ್ಡಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಕೃತಿ ದಹಿಸಿದರು.</p>.<p>‘ರೆಡ್ಡಿ ಅವರು ನಮ್ಮ ಬಳಿ ಅನುದಾನಕ್ಕಾಗಿ ಅಲೆದಾಡಿದರು. ಅನುಕೂಲ ಪಡೆದು ನಮ್ಮ ನಾಯಕರ ವಿರುದ್ಧವೇ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಈ ಕೂಡಲೇ ರೆಡ್ಡಿ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರೆಡ್ಡಿ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಜ್ಯೋತಿ ಗೊಂಡಬಾಳ, ಮಂಜುನಾಥ ಗೊಂಡಬಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಜನಾರ್ದನ ರೆಡ್ಡಿ ಮಣ್ಣಿನ ಕಳ್ಳ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಶೋಕ ವೃತ್ತದಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು ‘ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಹತ್ತು ವರ್ಷದಲ್ಲಿ ತೈಲ ಬೆಲೆಯನ್ನು ನೂರು ರೂಪಾಯಿ ದಾಟಿಸಿದೆ. ಜನಾರ್ದನ ರೆಡ್ಡಿ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಆ ಪಕ್ಷದ ನಾಯಕರ ಓಲೈಕೆಗೆ ಅಬ್ಬರಿಸುತ್ತಿದ್ದಾರೆ. ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿನ ದೂಳು ಅಲ್ಲ, ಅವರ ಕಾಲಿನ ಉಗುರಿನಲ್ಲಿನ ದೂಳಿಗೂ ಸಮ ಇಲ್ಲ. ರೆಡ್ಡಿ ಅವರೇ ಇದು ಬಳ್ಳಾರಿಯಲ್ಲ, ಕೊಪ್ಪಳ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಂಗಳವಾರ ಬಿಜೆಪಿಯಿಂದ ನಡೆದಿದ್ದ ಪ್ರತಿಭಟನೆ ವೇಳೆ ರೆಡ್ಡಿ ‘ಸಾಮಾನ್ಯ ಜನರ ಬದುಕು ದಯನೀಯ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅಯೋಗ್ಯ’ ಎಂದು ಜರಿದು ಬಡವರ ಜೇಬಿಗೆ ಕತ್ತರಿ ಹಾಕುತ್ತಿರುವ ಪಿಕ್ ಪಾಕೆಟ್ ಸರ್ಕಾರ ಎಂದು ಹರಿಹಾಯ್ದಿದ್ದರು.</p>.<p>ಆದ್ದರಿಂದ ಕಾಂಗ್ರೆಸ್ ಮರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜನಾರ್ದನ ರೆಡ್ಡಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಕೃತಿ ದಹಿಸಿದರು.</p>.<p>‘ರೆಡ್ಡಿ ಅವರು ನಮ್ಮ ಬಳಿ ಅನುದಾನಕ್ಕಾಗಿ ಅಲೆದಾಡಿದರು. ಅನುಕೂಲ ಪಡೆದು ನಮ್ಮ ನಾಯಕರ ವಿರುದ್ಧವೇ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಈ ಕೂಡಲೇ ರೆಡ್ಡಿ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರೆಡ್ಡಿ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಸಂಸದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಜ್ಯೋತಿ ಗೊಂಡಬಾಳ, ಮಂಜುನಾಥ ಗೊಂಡಬಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>