<p><strong>ಸೋಮವಾರಪೇಟೆ</strong>: ತಾಲ್ಲೂಕಿನ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೂ ಕುಸಿತವಾದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದರು.<br><br> ಭೂಕುಸಿತ ಸಂಭವಿಸಿರುವ ಜಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅರ್ಬಝ್ ಅವರಿಗೆ ಸೂಚಿಸಿದರು.</p>.<p>ಭೂ ಕುಸಿತದಿಂದ ಕಾಫಿ ತೋಟಕ್ಕೆ ಹಾನಿಯಾಗಿದ್ದು, ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ತಾಕೀತು ಮಾಡಿದರು.</p>.<p>ಗ್ರಾಮದ ದೇವಾಲಯಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಕೂತಿ ಗ್ರಾಮದ ಅಧ್ಯಕ್ಷ ಎಚ್.ಎಂ.ಜಯರಾಮ್ ಮನವಿ ಮಾಡಿದರು. ಈ ಬಗ್ಗೆ ಶಾಸಕರು ಸೂಕ್ತ ಅನುದಾನ ಕಲ್ಪಿಸುವ ಭರವಸೆ ನೀಡಿದರು.</p>.<p>ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಯಾದವ್, ಖಜಾಂಚಿ ಲಕ್ಷ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಗ್ರಾಮಸ್ಥರಾದ ಪ್ರಕಾಶ್, ಜಗದೀಶ್, ಗ್ರಾಮ ಆಡಳಿತ ಅಧಿಕಾರಿ ಕರಿಬಸವರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ತಾಲ್ಲೂಕಿನ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೂ ಕುಸಿತವಾದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದರು.<br><br> ಭೂಕುಸಿತ ಸಂಭವಿಸಿರುವ ಜಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅರ್ಬಝ್ ಅವರಿಗೆ ಸೂಚಿಸಿದರು.</p>.<p>ಭೂ ಕುಸಿತದಿಂದ ಕಾಫಿ ತೋಟಕ್ಕೆ ಹಾನಿಯಾಗಿದ್ದು, ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ತಾಕೀತು ಮಾಡಿದರು.</p>.<p>ಗ್ರಾಮದ ದೇವಾಲಯಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಕೂತಿ ಗ್ರಾಮದ ಅಧ್ಯಕ್ಷ ಎಚ್.ಎಂ.ಜಯರಾಮ್ ಮನವಿ ಮಾಡಿದರು. ಈ ಬಗ್ಗೆ ಶಾಸಕರು ಸೂಕ್ತ ಅನುದಾನ ಕಲ್ಪಿಸುವ ಭರವಸೆ ನೀಡಿದರು.</p>.<p>ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಯಾದವ್, ಖಜಾಂಚಿ ಲಕ್ಷ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಗ್ರಾಮಸ್ಥರಾದ ಪ್ರಕಾಶ್, ಜಗದೀಶ್, ಗ್ರಾಮ ಆಡಳಿತ ಅಧಿಕಾರಿ ಕರಿಬಸವರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>