ವಿದ್ಯಾರ್ಥಿಗಳ ಬೇಡಿಕೆ ಆಲಿಸಿದ ಪೊನ್ನಣ್ಣ ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕೆಲವು ಬದಲಾವಣೆ ಆಗಿದೆ. ಇದರಿಂದ ಅರಣ್ಯಶಾಸ್ತ್ರ ಪದವೀಧರರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂಬುದು ವಿದ್ಯಾರ್ಥಿಗಳ ಬೇಡಿಕೆಯಾಗಿದೆ. ಇವರ ಬೇಡಿಕೆ ನ್ಯಾಯೋಚಿತವಾಗಿದ್ದು ಇದನ್ನು ಪರಿಶಿಲಿಸಿ ಬಗೆ ಹರಿಸುವುದಕ್ಕೆ ಸಮಯಾವಕಾಶ ಬೇಕಾಗಿದೆ. ಈ ಬಗ್ಗೆ ಸಬಂಧಪಟ್ಟ ಅಧಿಕಾರಿಗಳು ಮತ್ತು ಸಚವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.