<p><strong>ಮಡಿಕೇರಿ:</strong> ತಾಲ್ಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ- ಬಿಳಿಗೇರಿಯಿಂದ ತೋರಮಣ ಲಿಂಕ್ ರಸ್ತೆ ಹಾಗೂ ಬಿಳಿಗೇರಿ ಶಾದಿಯಾಲ್ ರಸ್ತೆ ₹ 20 ಲಕ್ಷ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.</p>.<p>ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂರಿಕಾಡು ರಸ್ತೆ ₹ 15 ಲಕ್ಷ ವೆಚ್ಚದ ಕಾಮಗಾರಿಗೂ ಅವರು ಇದೇ ವೇಳೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಭಾಗವಹಿಸಿದ್ದರು.</p>.<p>ನಂತರ ಅವರು, ತಾಲ್ಲೂಕಿನ ಹುಲಿತಾಳ ಗ್ರಾಮದಲ್ಲಿ ಈಚೆಗೆ ವಿದ್ಯುತ್ ಆಘಾತದಿಂದ ಮೃತಪಟ್ಟ ಎಚ್.ಪಿ.ಪ್ರದೀಪ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. </p>.<p>ನಂತರ, ಕಗ್ಗೊಡ್ಲು ಬಳಿಯ ಹೂಕಾಡು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಇಲ್ಲಿನ ದೇವಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>Highlights - ಹೂಕಾಡು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ದೇಗುಲ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ತಾಲ್ಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ- ಬಿಳಿಗೇರಿಯಿಂದ ತೋರಮಣ ಲಿಂಕ್ ರಸ್ತೆ ಹಾಗೂ ಬಿಳಿಗೇರಿ ಶಾದಿಯಾಲ್ ರಸ್ತೆ ₹ 20 ಲಕ್ಷ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.</p>.<p>ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂರಿಕಾಡು ರಸ್ತೆ ₹ 15 ಲಕ್ಷ ವೆಚ್ಚದ ಕಾಮಗಾರಿಗೂ ಅವರು ಇದೇ ವೇಳೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಭಾಗವಹಿಸಿದ್ದರು.</p>.<p>ನಂತರ ಅವರು, ತಾಲ್ಲೂಕಿನ ಹುಲಿತಾಳ ಗ್ರಾಮದಲ್ಲಿ ಈಚೆಗೆ ವಿದ್ಯುತ್ ಆಘಾತದಿಂದ ಮೃತಪಟ್ಟ ಎಚ್.ಪಿ.ಪ್ರದೀಪ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. </p>.<p>ನಂತರ, ಕಗ್ಗೊಡ್ಲು ಬಳಿಯ ಹೂಕಾಡು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಇಲ್ಲಿನ ದೇವಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>Highlights - ಹೂಕಾಡು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ದೇಗುಲ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>