ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕಳೆದ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಎಸ್.ಪಿ.ದಿನೇಶ್ ಕೇವಲ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇದೀಗ ಮೂರನೇ ಬಾರಿಗೆ ಆಯ್ಕೆ ಬಯಸಿ ಸ್ವತಂತ್ರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಪದವೀಧರರ ಸಮಸ್ಯೆಗಳ ಕುರಿತು ಆಳವಾಗಿ ಅಧ್ಯಯನ ನಡೆಸಿರುವ ಅವರು ಹಿರಿಯ ನ್ಯಾಯವಾದಿ, ಬದ್ಧತೆಯುಳ್ಳ ಮತ್ತು ದೂರ ದೃಷ್ಟಿಯುಳ್ಳ ರಾಜಕಾರಣಿ. ಈ ಬಾರಿ ಚುನಾವಣೆಯಲ್ಲಿ ಪದವೀಧರರು ಅವರನ್ನು ಕೈ ಹಿಡಿಯುವ ವಿಶ್ವಾಸವಿದ್ದು, ಮೂರನೇ ಬಾರಿಯ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.