ಕಳೆದ ಕೆಲ ತಿಂಗಳುಗಳಿಂದ ಮಂಗ ಗಳ ಹಾವಳಿ ಜಾಸ್ತಿ ಆಗಿದ್ದು, ರೈತರು ಜಮೀನಿಗೆ ಹೋಗುವಾಗಿಲ್ಲ. ಮಕ್ಕಳು ಮನೆಯಿಂದ ಹೊರ ಬರುವಂತಿಲ್ಲ, ಸುಮ್ಮನೆ ದಾರಿಯಲ್ಲಿ ಹೋಗುವವರ ಮೇಲೆ ಎರಗಿ ಕಚ್ಚಿ ಗಾಯಗೊಳಿಸುತ್ತಿವೆ. ಇದರಿಂದ ಕೂಡಿಗೆ ಗ್ರಾಮದ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ಜನರು ಮನೆಯಿಂದ ಹೊರ ಹೋಗಲು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಇನ್ನೂ ಈ ಮಂಗಗಳನ್ನು ಸೆರೆ ಹಿಡಿಯಲು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ; ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಗ್ರಾಮ ಪಂಚಾಯಿತಿ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.