ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಸೋಮವಾರಪೇಟೆ ಡಿವೈಎಸ್ಪಿ ದಿನಕರ್ ಶೆಟ್ಟಿ, ಪಿಎಸ್ಐ ನಂಜುಂಡೇಗೌಡ, ಪಿಎಸ್ಐ ಶಿವಶಂಕರ್ ತೆರಳಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿಯೇ ಶ್ವಾನ ದಳವಿದ್ದರೂ ಯಾವುದೇ ಪರಿಶೀಲನೆ ನಡೆಸದೇ ಮೃತದೇಹ ಸ್ಥಳಾಂತರಿಸಲು ಮುಂದಾದ ಪೊಲೀಸರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.