<p><strong>ಮಡಿಕೇರಿ:</strong> ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಅಧಿಕೃತ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಇದಕ್ಕೂ ಮುನ್ನ ಹೋಮ, ಹವನಗಳು ಹಾಗೂ ಧಾರ್ಮಿಕ ಕೈಂಕರ್ಯಗಳಲ್ಲಿ ಅವರು ಭಾಗಿಯಾದರು.</p>.<p>ನಂತರ ಮಾತನಾಡಿದ ಅವರು, ‘ನಾನಿಲ್ಲಿ ವಾರದಲ್ಲಿ ಒಂದು ದಿನ ಸಾರ್ವಜನಿರಿಗೆ ಸಿಗುವ ಪ್ರಯತ್ನ ಮಾಡುವೆ. ವಾರದಲ್ಲಿ 3 ದಿನಗಳ ಕಾಲ ನನ್ನ ಆಪ್ತ ಸಹಾಯಕರು ಇಲ್ಲಿರುತ್ತಾರೆ ಹಾಗೂ ಎಲ್ಲ ದಿನ ಸಲಹೆಗಾರರು ಇರುವಂತೆ ನೋಡಿಕೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಸಮಸ್ಯೆ, ಅಹವಾಲುಗಳನ್ನು ಕಚೇರಿಯಲ್ಲಿ ನೇರವಾಗಿ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಘಟನೆ ನಿಜಕ್ಕೂ ನನಗೆ ಅಸಮಾಧಾನ ತರಿಸಿದೆ. ರಾಜ್ಯ ಸರ್ಕಾರ ಇದರ ಹೊಣೆ ಹೊರಬೇಕು, ಆರೋಗ್ಯ ಖಾತೆ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ವಿರೋಧ ಪಕ್ಷವಾಗಿ ನಾವು ತೀವ್ರ ಹೋರಾಟ ಮಾಡುತ್ತೇವೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಇರುತ್ತದೆ’ ಎಂದು ಹೇಳಿದರು.</p>.<p>‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ನಾವು ಎಲ್ಲಾ ರೀತಿಯಲ್ಲೂ ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಇರುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಒಳ್ಳೆಯ ಆಡಳಿತ ಬರಬೇಕು. ಆ ಮೂಲಕ ರಾಜ್ಯದ ಅಭಿವೃದ್ಧಿ ಆಗಬೇಕು. ಆ ದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಪಕ್ಷದ ಹಿರಿಯರೆಲ್ಲರೂ ಸೇರಿ ನಿರ್ಧರಿಸಿದ್ದಾರೆ. ಅವರು ನಿಲುವಿನಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮುಖಂಡರಾ ಅನಿತಾ ಪೂವಯ್ಯ, ಉಮೇಶ್ ಸುಬ್ರಮಣಿ, ಬೊಳ್ಳಜಿರ ಬಿ ಅಯ್ಯಪ್ಪ, ಸಬಿತಾ, ಶ್ವೇತಾ ಪ್ರಶಾಂತ್ ಭಾಗವಹಿಸಿದ್ದರು.</p>.<p><strong>ಚತುಷ್ಪಥ ರಸ್ತೆ ಕಾಮಗಾರಿ</strong> </p><p>3 ತಿಂಗಳಲ್ಲಿ ಆರಂಭ ಮೈಸೂರು– ಕುಶಾಲನಗರ ಚತುಷ್ಪಥ ರಸ್ತೆ ಕಾಮಗಾರಿ ಇನ್ನು 3 ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಈಗಾಗಲೇ ಭೂಮಿ ಸರ್ವೆ ಕಾರ್ಯ ಆರಂಭವಾಗಿದೆ. ಜೊತೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಅಧಿಕೃತ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಇದಕ್ಕೂ ಮುನ್ನ ಹೋಮ, ಹವನಗಳು ಹಾಗೂ ಧಾರ್ಮಿಕ ಕೈಂಕರ್ಯಗಳಲ್ಲಿ ಅವರು ಭಾಗಿಯಾದರು.</p>.<p>ನಂತರ ಮಾತನಾಡಿದ ಅವರು, ‘ನಾನಿಲ್ಲಿ ವಾರದಲ್ಲಿ ಒಂದು ದಿನ ಸಾರ್ವಜನಿರಿಗೆ ಸಿಗುವ ಪ್ರಯತ್ನ ಮಾಡುವೆ. ವಾರದಲ್ಲಿ 3 ದಿನಗಳ ಕಾಲ ನನ್ನ ಆಪ್ತ ಸಹಾಯಕರು ಇಲ್ಲಿರುತ್ತಾರೆ ಹಾಗೂ ಎಲ್ಲ ದಿನ ಸಲಹೆಗಾರರು ಇರುವಂತೆ ನೋಡಿಕೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಸಮಸ್ಯೆ, ಅಹವಾಲುಗಳನ್ನು ಕಚೇರಿಯಲ್ಲಿ ನೇರವಾಗಿ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಘಟನೆ ನಿಜಕ್ಕೂ ನನಗೆ ಅಸಮಾಧಾನ ತರಿಸಿದೆ. ರಾಜ್ಯ ಸರ್ಕಾರ ಇದರ ಹೊಣೆ ಹೊರಬೇಕು, ಆರೋಗ್ಯ ಖಾತೆ ಸಚಿವರು ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.</p>.<p>‘ವಿರೋಧ ಪಕ್ಷವಾಗಿ ನಾವು ತೀವ್ರ ಹೋರಾಟ ಮಾಡುತ್ತೇವೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಇರುತ್ತದೆ’ ಎಂದು ಹೇಳಿದರು.</p>.<p>‘ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ನಾವು ಎಲ್ಲಾ ರೀತಿಯಲ್ಲೂ ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಇರುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಒಳ್ಳೆಯ ಆಡಳಿತ ಬರಬೇಕು. ಆ ಮೂಲಕ ರಾಜ್ಯದ ಅಭಿವೃದ್ಧಿ ಆಗಬೇಕು. ಆ ದೃಷ್ಟಿಯಿಂದ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಪಕ್ಷದ ಹಿರಿಯರೆಲ್ಲರೂ ಸೇರಿ ನಿರ್ಧರಿಸಿದ್ದಾರೆ. ಅವರು ನಿಲುವಿನಂತೆ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮುಖಂಡರಾ ಅನಿತಾ ಪೂವಯ್ಯ, ಉಮೇಶ್ ಸುಬ್ರಮಣಿ, ಬೊಳ್ಳಜಿರ ಬಿ ಅಯ್ಯಪ್ಪ, ಸಬಿತಾ, ಶ್ವೇತಾ ಪ್ರಶಾಂತ್ ಭಾಗವಹಿಸಿದ್ದರು.</p>.<p><strong>ಚತುಷ್ಪಥ ರಸ್ತೆ ಕಾಮಗಾರಿ</strong> </p><p>3 ತಿಂಗಳಲ್ಲಿ ಆರಂಭ ಮೈಸೂರು– ಕುಶಾಲನಗರ ಚತುಷ್ಪಥ ರಸ್ತೆ ಕಾಮಗಾರಿ ಇನ್ನು 3 ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಈಗಾಗಲೇ ಭೂಮಿ ಸರ್ವೆ ಕಾರ್ಯ ಆರಂಭವಾಗಿದೆ. ಜೊತೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>