ಜಿಲ್ಲೆಯ ಮೂರು ಗ್ರಾಮಗಳನ್ನು ಮಣ್ಣು ಆರೋಗ್ಯ ಅಭಿಯಾನದ ಅಡಿ ಆಯ್ಕೆಯಾಗಿದ್ದು, ಮಣ್ಣು ಪರೀಕ್ಷೆ ಮೂಲಕ ಗ್ರಾಮದ ಭೂಮಿ ಫಲವತ್ತತೆ ಸಮೀಕ್ಷೆ ನಡೆಸಲಾಗುತ್ತಿದೆ. ಹಾಕತ್ತೂರು (ಮಡಿಕೇರಿ), ನಂಜರಾಯಪಟ್ಟಣ (ಸೋಮವಾರಪೇಟೆ), ಕದನೂರು (ವಿರಾಜಪೇಟೆ) ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜು ತಿಳಿಸಿದರು.