<p><strong>ಮಡಿಕೇರಿ</strong>: ತಾಲ್ಲೂಕಿನ ಮಕ್ಕಂದೂರು ಗ್ರಾಮ ಪಂಚಾಯಿತಿಗೆ ಸೇರಿದ ಮುಕ್ಕೋಡ್ಲು ಗ್ರಾಮದ ಜನರು ಮೂಲಸೌಕರ್ಯ ಒದಗಿಸದೇ ಹೋದರೆ ಮಡಿಕೇರಿ– ಸೋಮವಾರಪೇಟೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶುಕ್ರವಾರ ಎಚ್ಚರಿಕೆ ನೀಡಿದರು.</p>.<p>ತಂತಿಪಾಲದಿಂದ ಕಲ್ಲುಕೋಟೆಯವರೆಗಿನ 6–7 ಕಿ.ಮೀ ರಸ್ತೆಯು ತೀರಾ ದಯನೀಯವಾಗಿದೆ. ಗುಂಡಿ ಬಿದ್ದ ರಸ್ತೆಗಳಲ್ಲಿಯೇ ಶಾಲಾ ಮಕ್ಕಳು ಸಂಚರಿಸಬೇಕಿದೆ. ಕೃಷಿ ಫಸಲು ಮಾರಾಟ ಮಾಡಲು ಸಾಗಾಣಿಕೆಯೂ ಇಲ್ಲಿ ಕಷ್ಟಕರವಾಗಿದೆ. ರೋಗಪೀಡಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ತೀರಾ ತ್ರಾಸದಾಯಕವಾಗಿದೆ ಎಂದು ಗ್ರಾಮಸ್ಥರು ದೂರಿದರು.</p>.<p>ಮೊಬೈಲ್ ನೆಟ್ವರ್ಕ್ ಇಲ್ಲಿ ಸಿಗುವುದಿಲ್ಲ. ಸ್ವಲ್ಪ ಮಳೆ ಬಂದರೂ ವಿದ್ಯುತ್ ಸಂಪರ್ಕ ಕಡಿತಗೊಂಡು ಇಡೀ ಗ್ರಾಮ ಕತ್ತಲೆಯಲ್ಲಿ ಮುಳುಗುತ್ತದೆ. ಈ ಸಂಬಂಧ ಹಲವು ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಜನಪ್ರತಿನಿಧಿಗಳಿಂದ ಕೇವಲ ಭರವಸೆಗಳಷ್ಟೇ ಸಿಕ್ಕಿದೆ. ಆದಷ್ಟು ಬೇಗ ರಸ್ತೆ ಸರಿಪಡಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮಕ್ಕಳನ್ನು ಹಟ್ಟಿಹೊಳೆಯವರೆಗೂ ಪೋಷಕರೇ ಬಿಡಬೇಕು. ವಿದ್ಯುತ್ ಹಾಗೂ ಮೊಬೈಲ್ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದೆ’ ಎಂದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಗಿರೀಶ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<p>‘₹ 10 ಕೋಟಿಗೆ 8 ಕಿ.ಮೀ ರಸ್ತೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗಿಡಗಂಟಿಗಳ ತೆರವು ಹಾಗೂ ಇನ್ನಿತರ ಕಾರ್ಯಗಳನ್ನು ನಡೆಸಲಾಗುವುದು’ ಎಂದು ಗಿರೀಶ್ ಭರವಸೆ ನೀಡಿದರು.</p>.<p>ಈ ಗ್ರಾಮದಲ್ಲಿ 50ರಿಂದ 60 ಕುಟುಂಬಗಳ 250 ಮಂದಿ ವಾಸಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ತಾಲ್ಲೂಕಿನ ಮಕ್ಕಂದೂರು ಗ್ರಾಮ ಪಂಚಾಯಿತಿಗೆ ಸೇರಿದ ಮುಕ್ಕೋಡ್ಲು ಗ್ರಾಮದ ಜನರು ಮೂಲಸೌಕರ್ಯ ಒದಗಿಸದೇ ಹೋದರೆ ಮಡಿಕೇರಿ– ಸೋಮವಾರಪೇಟೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶುಕ್ರವಾರ ಎಚ್ಚರಿಕೆ ನೀಡಿದರು.</p>.<p>ತಂತಿಪಾಲದಿಂದ ಕಲ್ಲುಕೋಟೆಯವರೆಗಿನ 6–7 ಕಿ.ಮೀ ರಸ್ತೆಯು ತೀರಾ ದಯನೀಯವಾಗಿದೆ. ಗುಂಡಿ ಬಿದ್ದ ರಸ್ತೆಗಳಲ್ಲಿಯೇ ಶಾಲಾ ಮಕ್ಕಳು ಸಂಚರಿಸಬೇಕಿದೆ. ಕೃಷಿ ಫಸಲು ಮಾರಾಟ ಮಾಡಲು ಸಾಗಾಣಿಕೆಯೂ ಇಲ್ಲಿ ಕಷ್ಟಕರವಾಗಿದೆ. ರೋಗಪೀಡಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ತೀರಾ ತ್ರಾಸದಾಯಕವಾಗಿದೆ ಎಂದು ಗ್ರಾಮಸ್ಥರು ದೂರಿದರು.</p>.<p>ಮೊಬೈಲ್ ನೆಟ್ವರ್ಕ್ ಇಲ್ಲಿ ಸಿಗುವುದಿಲ್ಲ. ಸ್ವಲ್ಪ ಮಳೆ ಬಂದರೂ ವಿದ್ಯುತ್ ಸಂಪರ್ಕ ಕಡಿತಗೊಂಡು ಇಡೀ ಗ್ರಾಮ ಕತ್ತಲೆಯಲ್ಲಿ ಮುಳುಗುತ್ತದೆ. ಈ ಸಂಬಂಧ ಹಲವು ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ಜನಪ್ರತಿನಿಧಿಗಳಿಂದ ಕೇವಲ ಭರವಸೆಗಳಷ್ಟೇ ಸಿಕ್ಕಿದೆ. ಆದಷ್ಟು ಬೇಗ ರಸ್ತೆ ಸರಿಪಡಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮಕ್ಕಳನ್ನು ಹಟ್ಟಿಹೊಳೆಯವರೆಗೂ ಪೋಷಕರೇ ಬಿಡಬೇಕು. ವಿದ್ಯುತ್ ಹಾಗೂ ಮೊಬೈಲ್ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದೆ’ ಎಂದರು.</p>.<p>ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಗಿರೀಶ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.</p>.<p>‘₹ 10 ಕೋಟಿಗೆ 8 ಕಿ.ಮೀ ರಸ್ತೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗಿಡಗಂಟಿಗಳ ತೆರವು ಹಾಗೂ ಇನ್ನಿತರ ಕಾರ್ಯಗಳನ್ನು ನಡೆಸಲಾಗುವುದು’ ಎಂದು ಗಿರೀಶ್ ಭರವಸೆ ನೀಡಿದರು.</p>.<p>ಈ ಗ್ರಾಮದಲ್ಲಿ 50ರಿಂದ 60 ಕುಟುಂಬಗಳ 250 ಮಂದಿ ವಾಸಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>