ಗ್ರಾಮದ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ 6 ಗಂಟೆಗೆ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯ ಮೂರ್ತಿಯನ್ನು ಅಡ್ಡಪಲ್ಲಕಿಯಲ್ಲಿ ಕೂರಿಸಿ ಮುಳ್ಳೂರು ಜಂಕ್ಷನ್ನಲ್ಲಿರುವ ಅರಳಿಕಟ್ಟೆಗೆ ತರಲಾಯಿತು. ನಂತರ, ಅರಳಿಕಟ್ಟೆಯಲ್ಲಿ ಕಳಸಪೂಜೆ ಸಲ್ಲಿಸಿ ಕಳಸಹೊತ್ತ ಮಹಿಳೆಯರು, ಭಕ್ತಾದಿಗಳು, ಗ್ರಾಮಸ್ಥರು ಮಂಗಳವಾದ್ಯದೊಂದಿಗೆ ಹೆಜ್ಜೆ ಹಾಕಿದರು. ಬಸವೇಶ್ವರಸ್ವಾಮಿ ಅಡ್ಡಪಲ್ಲಕ್ಕಿ ಮೆರವಣಿಗೆ ದೇವಸ್ಥಾನ ತಲುಪಿದ ಬಳಿಕ ಅರ್ಚಕರು ದೇವಸ್ಥಾನದಲ್ಲಿ ಬಸವೇಶ್ವರಸ್ವಾಮಿಗೆ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.