<p><strong>ಸೋಮವಾರಪೇಟೆ:</strong> ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿ ಬಂಡೆ ಮೇಲೆ ತಪಸ್ಸು ಮಾಡಿ ವಿಶ್ವಗುರು ಭಾರತ ಎಂಬ ಮಹಾಸಂಕಲ್ಪ ರೂಪಿಸಿದ ಡಿ.25ರ ದಿನವನ್ನು ತಾಲ್ಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ವಿದ್ಯಾರ್ಥಿಗಳು ಯುವ ಬ್ರಿಗೇಡ್ ‘ರಾಕ್ ಡೇ’ ಆಗಿ ಗುರುವಾರ ಆಚರಿಸಿದರು. </p>.<p>ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗದಡಿ ತರಬೇತಿ ಪಡೆಯುತ್ತಿರುವ ಕರಾಟೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು ಹಾಗೂ ಯುವಶಕ್ತಿ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಿಕ್ಷಕಿ ಸೀಮಾ ಮಾತನಾಡಿ, ವಿವೇಕಾನಂದರು ‘ಯುವಶಕ್ತಿಯೇ ರಾಷ್ಟ್ರಶಕ್ತಿ-ವಿಶ್ವಗುರು ಭಾರತ ನಮ್ಮ ಗುರಿ’ ಎಂಬ ಸಂದೇಶವನ್ನು ಅಂದೇ ನೀಡಿದ್ದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಆತ್ಮಸ್ಥೈರ್ಯ ಮತ್ತು ದೇಶಭಕ್ತಿಯ ಭಾವನೆಗಳನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಕನಸನ್ನು ಸಾಕಾರಗೊಳಿಸುವ ಹೊಣೆ ವಿದ್ಯಾರ್ಥಿಗಳ ಮೇಲಿದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಸೇವೆಯ ಸಂಕಲ್ಪ ಕೈಗೊಂಡರು.</p>.<p>ಮುಖ್ಯ ಶಿಕ್ಷಕರಾದ ಸಿ.ಎಸ್. ಸತಿಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಜಾನ್ ಪಾವ್ಲ್ ಡಿಸೋಜ ಹಾಗೂ ಶೀಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿ ಬಂಡೆ ಮೇಲೆ ತಪಸ್ಸು ಮಾಡಿ ವಿಶ್ವಗುರು ಭಾರತ ಎಂಬ ಮಹಾಸಂಕಲ್ಪ ರೂಪಿಸಿದ ಡಿ.25ರ ದಿನವನ್ನು ತಾಲ್ಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ವಿದ್ಯಾರ್ಥಿಗಳು ಯುವ ಬ್ರಿಗೇಡ್ ‘ರಾಕ್ ಡೇ’ ಆಗಿ ಗುರುವಾರ ಆಚರಿಸಿದರು. </p>.<p>ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗದಡಿ ತರಬೇತಿ ಪಡೆಯುತ್ತಿರುವ ಕರಾಟೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು ಹಾಗೂ ಯುವಶಕ್ತಿ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಶಿಕ್ಷಕಿ ಸೀಮಾ ಮಾತನಾಡಿ, ವಿವೇಕಾನಂದರು ‘ಯುವಶಕ್ತಿಯೇ ರಾಷ್ಟ್ರಶಕ್ತಿ-ವಿಶ್ವಗುರು ಭಾರತ ನಮ್ಮ ಗುರಿ’ ಎಂಬ ಸಂದೇಶವನ್ನು ಅಂದೇ ನೀಡಿದ್ದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಆತ್ಮಸ್ಥೈರ್ಯ ಮತ್ತು ದೇಶಭಕ್ತಿಯ ಭಾವನೆಗಳನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಕನಸನ್ನು ಸಾಕಾರಗೊಳಿಸುವ ಹೊಣೆ ವಿದ್ಯಾರ್ಥಿಗಳ ಮೇಲಿದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಸೇವೆಯ ಸಂಕಲ್ಪ ಕೈಗೊಂಡರು.</p>.<p>ಮುಖ್ಯ ಶಿಕ್ಷಕರಾದ ಸಿ.ಎಸ್. ಸತಿಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಜಾನ್ ಪಾವ್ಲ್ ಡಿಸೋಜ ಹಾಗೂ ಶೀಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>