<p><strong>ಶನಿವಾರಸಂತೆ:</strong> ‘ತೆಂಗಿನ ಮರದಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಪುತ್ರ ಮೃತಪಟ್ಟಿದ್ದಾನೆ’ ಎಂದು ದೂರು ನೀಡಿದ್ದ ತಂದೆಯನ್ನೇ ಕೊಲೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿನ ಬೈಪಾಸ್ ರಸ್ತೆಯ ಮಹೇಂದ್ರ ಕುಮಾರ್ ಬಂಧಿತ ಆರೋಪಿ.</p>.<p>ಮಡಿಕೇರಿ ಕೆಎಸ್ಆರ್ಟಿಸಿಯಲ್ಲಿ ನಿರ್ವಾಹಕರಾಗಿರುವ ಆರೋಪಿ, ಇದೇ 1ರಂದು ಪುತ್ರ ಏಕಾಂತಾಚಾರಿ (20) ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಶವ ಪರೀಕ್ಷೆ ಸಂದರ್ಭದಲ್ಲಿ ಹಲ್ಲೆ ನಡೆಸಿದಾಗ ಗುರುತು ಗೋಚರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಮಹೇಂದ್ರ ಕುಮಾರ್, ಪುತ್ರನನ್ನು ತೋಟಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಣ ತಿಳಿದುಬಂದಿಲ್ಲ.</p>.<p>ಸಿಪಿಐ ಬಿ.ಜಿ.ಮಹೇಶ್, ಪಿಎಸ್ಐ ಎಚ್.ಈ.ದೇವರಾಜ್, ಸಿಬ್ಬಂದಿ ಲೋಕೇಶ್, ಅನಂತಕುಮಾರ್, ಪ್ರದೀಪ್ ಕುಮಾರ್, ಮುರಳಿ, ಹರೀಶ್, ದಯಾನಂದ್, ಗಿರೀಶ್, ರಾಜೇಶ್ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ‘ತೆಂಗಿನ ಮರದಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಪುತ್ರ ಮೃತಪಟ್ಟಿದ್ದಾನೆ’ ಎಂದು ದೂರು ನೀಡಿದ್ದ ತಂದೆಯನ್ನೇ ಕೊಲೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.</p>.<p>ಇಲ್ಲಿನ ಬೈಪಾಸ್ ರಸ್ತೆಯ ಮಹೇಂದ್ರ ಕುಮಾರ್ ಬಂಧಿತ ಆರೋಪಿ.</p>.<p>ಮಡಿಕೇರಿ ಕೆಎಸ್ಆರ್ಟಿಸಿಯಲ್ಲಿ ನಿರ್ವಾಹಕರಾಗಿರುವ ಆರೋಪಿ, ಇದೇ 1ರಂದು ಪುತ್ರ ಏಕಾಂತಾಚಾರಿ (20) ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಶವ ಪರೀಕ್ಷೆ ಸಂದರ್ಭದಲ್ಲಿ ಹಲ್ಲೆ ನಡೆಸಿದಾಗ ಗುರುತು ಗೋಚರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಮಹೇಂದ್ರ ಕುಮಾರ್, ಪುತ್ರನನ್ನು ತೋಟಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಣ ತಿಳಿದುಬಂದಿಲ್ಲ.</p>.<p>ಸಿಪಿಐ ಬಿ.ಜಿ.ಮಹೇಶ್, ಪಿಎಸ್ಐ ಎಚ್.ಈ.ದೇವರಾಜ್, ಸಿಬ್ಬಂದಿ ಲೋಕೇಶ್, ಅನಂತಕುಮಾರ್, ಪ್ರದೀಪ್ ಕುಮಾರ್, ಮುರಳಿ, ಹರೀಶ್, ದಯಾನಂದ್, ಗಿರೀಶ್, ರಾಜೇಶ್ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>