ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆಯಿಂದಲೇ ಮಗನ ಕೊಲೆ: ಆರೋಪಿ ಬಂಧನ

Last Updated 11 ಫೆಬ್ರುವರಿ 2021, 12:28 IST
ಅಕ್ಷರ ಗಾತ್ರ

ಶನಿವಾರಸಂತೆ: ‘ತೆಂಗಿನ ಮರದಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಪುತ್ರ ಮೃತಪಟ್ಟಿದ್ದಾನೆ’ ಎಂದು ದೂರು ನೀಡಿದ್ದ ತಂದೆಯನ್ನೇ ಕೊಲೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಬೈಪಾಸ್ ರಸ್ತೆಯ ಮಹೇಂದ್ರ ಕುಮಾರ್ ಬಂಧಿತ ಆರೋಪಿ.

ಮಡಿಕೇರಿ ಕೆಎಸ್‌ಆರ್‌ಟಿಸಿಯಲ್ಲಿ ನಿರ್ವಾಹಕರಾಗಿರುವ ಆರೋಪಿ, ಇದೇ 1ರಂದು ಪುತ್ರ ಏಕಾಂತಾಚಾರಿ (20) ತೋಟದಲ್ಲಿ ಮರದಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ದೂರು ನೀಡಿದ್ದರು. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶವ ಪರೀಕ್ಷೆ ಸಂದರ್ಭದಲ್ಲಿ ಹಲ್ಲೆ ನಡೆಸಿದಾಗ ಗುರುತು ಗೋಚರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಮಹೇಂದ್ರ ಕುಮಾರ್‌, ಪುತ್ರನನ್ನು ತೋಟಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಣ ತಿಳಿದುಬಂದಿಲ್ಲ.

ಸಿಪಿಐ ಬಿ.ಜಿ.ಮಹೇಶ್, ಪಿಎಸ್ಐ ಎಚ್.ಈ.ದೇವರಾಜ್, ಸಿಬ್ಬಂದಿ ಲೋಕೇಶ್, ಅನಂತಕುಮಾರ್, ಪ್ರದೀಪ್ ಕುಮಾರ್, ಮುರಳಿ, ಹರೀಶ್, ದಯಾನಂದ್, ಗಿರೀಶ್, ರಾಜೇಶ್ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT