<p><strong>ಕುಶಾಲನಗರ: </strong>ಪಟ್ಟಣದ ಮುತ್ತೂಟ್ ಫೈನಾನ್ಸ್ ವತಿಯಿಂದ ‘ವಿವಾಹ ಸಮ್ಮಾನಂ’ ಯೋಜನೆಯಡಿ ಬಡ ಯುವತಿಯ ವಿವಾಹಕ್ಕೆ ₹1 ಲಕ್ಷ ಆರ್ಥಿಕ ನೆರವು ನೀಡಲಾಯಿತು.</p>.<p>ಸಂಸ್ಥೆಯ ಸಾಮಾಜಿಕ ಸೇವಾ ನಿಧಿಯಿಂದ ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಮದಲಾಪುರದ ಹರಿಣಿ ಎಂಬುವರ ಪುತ್ರಿಎಂ.ಆರ್. ವಿದ್ಯಾ ಅವರ ವಿವಾಹಕ್ಕೆ ನೆರವಾಗುವ ನಿಟ್ಟಿನಲ್ಲಿ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಲಿಬಿನ್ ಕೆ. ಆಂಟೋನಿ ₹1 ಲಕ್ಷ ಮೊತ್ತದ ಚೆಕ್ ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಬಡ ವಿದ್ಯಾರ್ಥಿಗಳ ಶಿಕ್ಷಣ, ಕಡು ಬಡವರ ಅನಾರೋಗ್ಯ ಸಮಸ್ಯೆಗಳಿಗೆ ಸಂಸ್ಥೆ ಮೂಲಕ ಅಗತ್ಯ ನೆರವು ಒದಗಿಸಲಾಗುತ್ತಿದೆ. ಈ ಬಾರಿ ಕಡುಬಡ ಹೆಣ್ಣು ಮಗಳ ಮದುವೆಗೆ ಆರ್ಥಿಕ ನೆರವು ನೀಡಲಾಗಿದೆ. ಅಗತ್ಯ ಸಹಕಾರ ಕೋರಿ ಅರ್ಜಿಗಳು ಬಂದಲ್ಲಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ನೆರವು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿದರು. ಉಪಾಧ್ಯಕ್ಷ ಗಿರೀಶ್, ಮುತ್ತೂಟ್ ಸಂಸ್ಥೆಯ ಜೋಹನ್ ಪಿಂಟೋ, ರಕ್ಷಿತ್ ಕೆ. ಅಪ್ಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಪಟ್ಟಣದ ಮುತ್ತೂಟ್ ಫೈನಾನ್ಸ್ ವತಿಯಿಂದ ‘ವಿವಾಹ ಸಮ್ಮಾನಂ’ ಯೋಜನೆಯಡಿ ಬಡ ಯುವತಿಯ ವಿವಾಹಕ್ಕೆ ₹1 ಲಕ್ಷ ಆರ್ಥಿಕ ನೆರವು ನೀಡಲಾಯಿತು.</p>.<p>ಸಂಸ್ಥೆಯ ಸಾಮಾಜಿಕ ಸೇವಾ ನಿಧಿಯಿಂದ ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಮದಲಾಪುರದ ಹರಿಣಿ ಎಂಬುವರ ಪುತ್ರಿಎಂ.ಆರ್. ವಿದ್ಯಾ ಅವರ ವಿವಾಹಕ್ಕೆ ನೆರವಾಗುವ ನಿಟ್ಟಿನಲ್ಲಿ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಲಿಬಿನ್ ಕೆ. ಆಂಟೋನಿ ₹1 ಲಕ್ಷ ಮೊತ್ತದ ಚೆಕ್ ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಬಡ ವಿದ್ಯಾರ್ಥಿಗಳ ಶಿಕ್ಷಣ, ಕಡು ಬಡವರ ಅನಾರೋಗ್ಯ ಸಮಸ್ಯೆಗಳಿಗೆ ಸಂಸ್ಥೆ ಮೂಲಕ ಅಗತ್ಯ ನೆರವು ಒದಗಿಸಲಾಗುತ್ತಿದೆ. ಈ ಬಾರಿ ಕಡುಬಡ ಹೆಣ್ಣು ಮಗಳ ಮದುವೆಗೆ ಆರ್ಥಿಕ ನೆರವು ನೀಡಲಾಗಿದೆ. ಅಗತ್ಯ ಸಹಕಾರ ಕೋರಿ ಅರ್ಜಿಗಳು ಬಂದಲ್ಲಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ನೆರವು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೂಡಿಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿದರು. ಉಪಾಧ್ಯಕ್ಷ ಗಿರೀಶ್, ಮುತ್ತೂಟ್ ಸಂಸ್ಥೆಯ ಜೋಹನ್ ಪಿಂಟೋ, ರಕ್ಷಿತ್ ಕೆ. ಅಪ್ಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>