ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಯ್ಯಪ್ಪ ಅವರು ಒಂದು ವರ್ಷದಿಂದ ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದರು. ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಇವರು ಉತ್ತಮ ಸಮಾಜ ಸೇವಕರೂ ಆಗಿದ್ದರು. ನೂರಾರು ಎಕರೆ ಕಾಫಿ ತೋಟ ಹೊಂದಿದ್ದ ಇವರು ಧನಸಹಾಯ ಬೇಡಿ ಮನೆಗೆ ಬಂದವರೆಗೆಲ್ಲ ಕೈಲಾದಷ್ಟು ಸಹಾಯ ಮಾಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿದ್ದರು.