<p><strong>ಕುಶಾಲನಗರ: </strong>ಪ್ರಸಿದ್ಧ ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಿಂದ 4 ಸಾಕಾನೆಗಳು ಮೈಸೂರಿನತ್ತ ಬುಧವಾರ ಸಂಜೆ ಪ್ರಯಾಣ ಆರಂಭಿಸಿದವು. ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಜ ಪಯಣಕ್ಕೆ ಚಾಲನೆ ನೀಡಲಾಯಿತು.</p>.<p>ಕಾವೇರಿ (43 ವರ್ಷ), ವಿಜಯಾ (61 ವರ್ಷ), ವಿಕ್ರಂ (57), ಗೋಪಿ (39) ಆನೆಗಳು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿವೆ.</p>.<p>ದುಬಾರೆ ಸಾಕಾನೆ ಶಿಬಿರದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮಾವುತರು ಬುಧವಾರ ಸಂಜೆ ಪಾಲ್ಗೊಂಡಿದ್ದರು.</p>.<p>ವಿವಿಧ ಹೂವುಗಳಿಂದ ಸಿಂಗರಿಸಿದ ಆನೆಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ದಸರಾ ಹಬ್ಬದ ಸಂದರ್ಭ ಯಾವುದೇ ಅನಾಹುತ ನಡೆಯದಂತೆ, ಆನೆಗಳು ಹಾಗೂ ಮಾವುತರಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಹಾಗೂ ಸಿಬ್ಬಂದಿಗಳು ಆನೆಗಳಿಗೆ ಕಬ್ಬು, ಬೆಲ್ಲ, ಹಣ್ಣುಗಳನ್ನು ತಿನ್ನಿಸಿ ಚಾಲನೆ ನೀಡಿದರು.</p>.<p>ಇದೇ ವೇಳೆ ಅನನ್ಯ ಕುಮಾರ್ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಿಂದ ದಸರಾ ಮಹೋತ್ಸವಕ್ಕೆ ನಾಲ್ಕು ಆನೆಗಳನ್ನು ಮತ್ತು ಅದರ ಮಾವುತರು ಹಾಗೂ ಕಾವಾಡಿಗರು, ಅವರ ಕುಟುಂಬದ ಸದಸ್ಯರು ಕೂಡ ಮೈಸೂರಿಗೆ ತೆರಳುತ್ತಿದ್ದಾರೆ ಎಂದರು.</p>.<p>ಮಾವುತರಾದ ಜೆ.ಕೆ.ಡೋಬಿ, ಜೆ.ಕೆ.ಭೋಜಪ್ಪ, ಜೆ.ಕೆ.ಮುತ್ತು, ಎಸ್.ನಾಗರಾಜು, ಕಾವಾಡಿಗಾರಾದ ರಂಜಾನ್, ಭರತ್, ಹೇಮಂತ್, ಶಿವು ಹಾಗೂ ಅವರ ಕುಟುಂಬ ವರ್ಗ ಕೂಡ ಆನೆಗಳ ಜೊತೆ ಪ್ರಯಾಣ ಬೆಳೆಸಿತು.</p>.<p>ರಾತ್ರಿ ಎಲ್ಲ ಆನೆಗಳನ್ನು ಲಾರಿಗೆ ಹತ್ತಿಸಿ ಕಳುಹಿಸಿ ಕೊಡಲಾಯಿತು.</p>.<p>ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸಹಾಯಕ ವಲಯ ಅರಣ್ಯಾಧಿಕಾರಿಗಳಾದ ರಂಜನ್, ಮಹಾದೇವ ನಾಯಕ್, ಅನಿಲ್ ಡಿಸೋಜ, ಸುಬ್ರಾಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಪ್ರಸಿದ್ಧ ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಿಂದ 4 ಸಾಕಾನೆಗಳು ಮೈಸೂರಿನತ್ತ ಬುಧವಾರ ಸಂಜೆ ಪ್ರಯಾಣ ಆರಂಭಿಸಿದವು. ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಜ ಪಯಣಕ್ಕೆ ಚಾಲನೆ ನೀಡಲಾಯಿತು.</p>.<p>ಕಾವೇರಿ (43 ವರ್ಷ), ವಿಜಯಾ (61 ವರ್ಷ), ವಿಕ್ರಂ (57), ಗೋಪಿ (39) ಆನೆಗಳು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿವೆ.</p>.<p>ದುಬಾರೆ ಸಾಕಾನೆ ಶಿಬಿರದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮಾವುತರು ಬುಧವಾರ ಸಂಜೆ ಪಾಲ್ಗೊಂಡಿದ್ದರು.</p>.<p>ವಿವಿಧ ಹೂವುಗಳಿಂದ ಸಿಂಗರಿಸಿದ ಆನೆಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ದಸರಾ ಹಬ್ಬದ ಸಂದರ್ಭ ಯಾವುದೇ ಅನಾಹುತ ನಡೆಯದಂತೆ, ಆನೆಗಳು ಹಾಗೂ ಮಾವುತರಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್ ಹಾಗೂ ಸಿಬ್ಬಂದಿಗಳು ಆನೆಗಳಿಗೆ ಕಬ್ಬು, ಬೆಲ್ಲ, ಹಣ್ಣುಗಳನ್ನು ತಿನ್ನಿಸಿ ಚಾಲನೆ ನೀಡಿದರು.</p>.<p>ಇದೇ ವೇಳೆ ಅನನ್ಯ ಕುಮಾರ್ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಿಂದ ದಸರಾ ಮಹೋತ್ಸವಕ್ಕೆ ನಾಲ್ಕು ಆನೆಗಳನ್ನು ಮತ್ತು ಅದರ ಮಾವುತರು ಹಾಗೂ ಕಾವಾಡಿಗರು, ಅವರ ಕುಟುಂಬದ ಸದಸ್ಯರು ಕೂಡ ಮೈಸೂರಿಗೆ ತೆರಳುತ್ತಿದ್ದಾರೆ ಎಂದರು.</p>.<p>ಮಾವುತರಾದ ಜೆ.ಕೆ.ಡೋಬಿ, ಜೆ.ಕೆ.ಭೋಜಪ್ಪ, ಜೆ.ಕೆ.ಮುತ್ತು, ಎಸ್.ನಾಗರಾಜು, ಕಾವಾಡಿಗಾರಾದ ರಂಜಾನ್, ಭರತ್, ಹೇಮಂತ್, ಶಿವು ಹಾಗೂ ಅವರ ಕುಟುಂಬ ವರ್ಗ ಕೂಡ ಆನೆಗಳ ಜೊತೆ ಪ್ರಯಾಣ ಬೆಳೆಸಿತು.</p>.<p>ರಾತ್ರಿ ಎಲ್ಲ ಆನೆಗಳನ್ನು ಲಾರಿಗೆ ಹತ್ತಿಸಿ ಕಳುಹಿಸಿ ಕೊಡಲಾಯಿತು.</p>.<p>ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸಹಾಯಕ ವಲಯ ಅರಣ್ಯಾಧಿಕಾರಿಗಳಾದ ರಂಜನ್, ಮಹಾದೇವ ನಾಯಕ್, ಅನಿಲ್ ಡಿಸೋಜ, ಸುಬ್ರಾಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>