<p>ನಾಪೋಕ್ಲು: ಕೊಡಗಿನ ಪ್ರಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ಇಲ್ಲಿನ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಭಾನುವಾರ ಸಾಂಪ್ರದಾಯಿಕವಾಗಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.</p>.<p>ಶನಿವಾರ ಮಧ್ಯಾಹ್ನ ಪೈಂಗುತ್ತಿ ಹಾಗೂ ಸಂಜೆ ಮುತ್ತಪ್ಪ ದೇವರ ಕಳಸ ನಡೆಯಿತು. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡೆಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯ ಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಯಿತು.</p>.<p>ಈ ಸಂದರ್ಭ ಸಿಡಿಮದ್ದು ಪ್ರದರ್ಶನ, ಕೇರಳದ ನೃತ್ಯ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪ ಮತ್ತಿತರ ಮನರಂಜನಾ ಕಾರ್ಯಕ್ರಮಗಳು ನಡೆದು ಜನಮನ ಆಕರ್ಷಿಸಿದವು. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ ವೆಳ್ಳಾಟಂ ನಡೆದವು.</p>.<p>ಉತ್ಸವದ ಅಂಗವಾಗಿ ಶುಕ್ರವಾರ ಗಣಪತಿ ಹೋಮ ಮತ್ತು ಶುದ್ಧ ಕಳಸ ಪೂಜೆಯನ್ನು ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರಿಂದ ನಡೆಸಲಾಯಿತು. ರಾತ್ರಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು.</p>.<p>ಭಾನುವಾರ ಪ್ರಾಂತಕಾಲ ಗುಳಿಗ ಕೋಲ, ಬಳಿಕ ಕುಟ್ಟಿಚಾತ ಕೋಲ ಹಾಗೂ ತಿರುವಪ್ಪನ್ ಮತ್ತು ಮುತ್ತಪ್ಪ ತೆರೆ ಜರುಗಿದವು.</p>.<p>ಉತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಸ್ವೀಕರಿಸಿದರು.</p>.<p>ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ.ಚಂದ್ರನ್, ಉಪಾಧ್ಯಕ್ಷ ಎಂ.ಕೆ.ತಂಗ, ಕಾರ್ಯದರ್ಶಿ ಅನಿಲ್ ಪಿ.ಕೆ, ಉಪ ಕಾರ್ಯದರ್ಶಿ ಸುಕುಮಾರ್ ಟಿ.ಕೆ, ಖಜಾಂಚಿ ಮಹೇಶ್ ಮೆನೋನ್, ದೇವಾಲಯದ ಪೂಜಾರಿ ಹರಿದಾಸ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1792331780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಪೋಕ್ಲು: ಕೊಡಗಿನ ಪ್ರಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ಇಲ್ಲಿನ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಭಾನುವಾರ ಸಾಂಪ್ರದಾಯಿಕವಾಗಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.</p>.<p>ಶನಿವಾರ ಮಧ್ಯಾಹ್ನ ಪೈಂಗುತ್ತಿ ಹಾಗೂ ಸಂಜೆ ಮುತ್ತಪ್ಪ ದೇವರ ಕಳಸ ನಡೆಯಿತು. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡೆಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯ ಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಯಿತು.</p>.<p>ಈ ಸಂದರ್ಭ ಸಿಡಿಮದ್ದು ಪ್ರದರ್ಶನ, ಕೇರಳದ ನೃತ್ಯ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪ ಮತ್ತಿತರ ಮನರಂಜನಾ ಕಾರ್ಯಕ್ರಮಗಳು ನಡೆದು ಜನಮನ ಆಕರ್ಷಿಸಿದವು. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ ವೆಳ್ಳಾಟಂ ನಡೆದವು.</p>.<p>ಉತ್ಸವದ ಅಂಗವಾಗಿ ಶುಕ್ರವಾರ ಗಣಪತಿ ಹೋಮ ಮತ್ತು ಶುದ್ಧ ಕಳಸ ಪೂಜೆಯನ್ನು ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರಿಂದ ನಡೆಸಲಾಯಿತು. ರಾತ್ರಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು.</p>.<p>ಭಾನುವಾರ ಪ್ರಾಂತಕಾಲ ಗುಳಿಗ ಕೋಲ, ಬಳಿಕ ಕುಟ್ಟಿಚಾತ ಕೋಲ ಹಾಗೂ ತಿರುವಪ್ಪನ್ ಮತ್ತು ಮುತ್ತಪ್ಪ ತೆರೆ ಜರುಗಿದವು.</p>.<p>ಉತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದ ಸ್ವೀಕರಿಸಿದರು.</p>.<p>ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ.ಚಂದ್ರನ್, ಉಪಾಧ್ಯಕ್ಷ ಎಂ.ಕೆ.ತಂಗ, ಕಾರ್ಯದರ್ಶಿ ಅನಿಲ್ ಪಿ.ಕೆ, ಉಪ ಕಾರ್ಯದರ್ಶಿ ಸುಕುಮಾರ್ ಟಿ.ಕೆ, ಖಜಾಂಚಿ ಮಹೇಶ್ ಮೆನೋನ್, ದೇವಾಲಯದ ಪೂಜಾರಿ ಹರಿದಾಸ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1792331780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>