<p>ಸುಂಟಿಕೊಪ್ಪ: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ದೇವಾಲಯಗಳಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು.</p>.<p>ಇಲ್ಲಿನ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ನಾಗಕಟ್ಟೆಯಲ್ಲಿ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಅರ್ಚಕ ಹಾ.ಮಾ.ಗಣೇಶ ಶರ್ಮಾ ಅವರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆದವು.</p>.<p>ಬೆಳಿಗ್ಗೆ ನಾಗಕಟ್ಟೆಗೆ ಶುದ್ಧಿಪೂಜೆ ನೆರವೇರಿಸಿದ ನಂತರ ನಾಗದೇವರಿಗೆ ಕ್ಷೀರಾಭಿಷೇಕ, ಎಳನೀರು, ಕುಂಕುಮ, ಅರಿಸಿನ ಅಭಿಷೇಕ, ಹೂವಿನ ಅರ್ಚನೆ ನೆರವೇರಿಸಿದರು. ನಂತರ ನಾಗ ದೇವರನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು.</p>.<p>ದೇವಾಲಯ ಸಮಿತಿ ಉಪಾಧ್ಯಕ್ಷ ಈಶ್ಚರ, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಶಾಂತರಾಮ ಕಾಮತ್, ಆನಂದ ಪೂಜಾರಿ ಸೇರಿದಂತೆ ಭಕ್ತರು ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.</p>.<p>ಸಮೀಪದ ಕೊಡಗರಹಳ್ಳಿಯ ಬೈತೂರಪ್ಪ, ಪೊವ್ವದಿ ಬಸವೇಶ್ವರ ದೇವಾಲಯದ ಆವರಣದಲ್ಲಿರುವ ನಾಗಸ್ಥಾನದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.</p>.<p>ದೇವಸ್ಥಾನ ಮುಖ್ಯ ಆರ್ಚಕರಾದ ನರಸಿಂಹಭಟ್, ಸಹ ಅರ್ಚಕ ರಾಮಶರ್ಮ ಅವರ ನೇತೃತ್ವದಲ್ಲಿ ಹಾಲಿನ ಅಭಿಷೇಕ, ಎಳನೀರು, ಅರಸಿನ, ಕುಂಕುಮಾರ್ಚನೆ ನಡೆದವು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್,ಖಜಾಂಚಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯದಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.</p>.<p>ಸಮೀಪದ ಪನ್ಯ ಗ್ರಾಮದ ಗ್ರಾಮ ದೇವತೆಯಾದ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಯಿತು. ಕೆದಕಲ್, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆಗಳಲ್ಲೂ ನಾಗರ ಪಂಚಮಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ದೇವಾಲಯಗಳಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು.</p>.<p>ಇಲ್ಲಿನ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ನಾಗಕಟ್ಟೆಯಲ್ಲಿ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಅರ್ಚಕ ಹಾ.ಮಾ.ಗಣೇಶ ಶರ್ಮಾ ಅವರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆದವು.</p>.<p>ಬೆಳಿಗ್ಗೆ ನಾಗಕಟ್ಟೆಗೆ ಶುದ್ಧಿಪೂಜೆ ನೆರವೇರಿಸಿದ ನಂತರ ನಾಗದೇವರಿಗೆ ಕ್ಷೀರಾಭಿಷೇಕ, ಎಳನೀರು, ಕುಂಕುಮ, ಅರಿಸಿನ ಅಭಿಷೇಕ, ಹೂವಿನ ಅರ್ಚನೆ ನೆರವೇರಿಸಿದರು. ನಂತರ ನಾಗ ದೇವರನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು.</p>.<p>ದೇವಾಲಯ ಸಮಿತಿ ಉಪಾಧ್ಯಕ್ಷ ಈಶ್ಚರ, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಶಾಂತರಾಮ ಕಾಮತ್, ಆನಂದ ಪೂಜಾರಿ ಸೇರಿದಂತೆ ಭಕ್ತರು ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.</p>.<p>ಸಮೀಪದ ಕೊಡಗರಹಳ್ಳಿಯ ಬೈತೂರಪ್ಪ, ಪೊವ್ವದಿ ಬಸವೇಶ್ವರ ದೇವಾಲಯದ ಆವರಣದಲ್ಲಿರುವ ನಾಗಸ್ಥಾನದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜಾ ವಿಧಿವಿಧಾನ ನೆರವೇರಿಸಲಾಯಿತು.</p>.<p>ದೇವಸ್ಥಾನ ಮುಖ್ಯ ಆರ್ಚಕರಾದ ನರಸಿಂಹಭಟ್, ಸಹ ಅರ್ಚಕ ರಾಮಶರ್ಮ ಅವರ ನೇತೃತ್ವದಲ್ಲಿ ಹಾಲಿನ ಅಭಿಷೇಕ, ಎಳನೀರು, ಅರಸಿನ, ಕುಂಕುಮಾರ್ಚನೆ ನಡೆದವು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<p>ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್,ಖಜಾಂಚಿ ಡಾ.ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪಾತ್ಯದಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.</p>.<p>ಸಮೀಪದ ಪನ್ಯ ಗ್ರಾಮದ ಗ್ರಾಮ ದೇವತೆಯಾದ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಯಿತು. ಕೆದಕಲ್, ಕೊಡಗರಹಳ್ಳಿ, ಹೊಸಕೋಟೆ, ಕಂಬಿಬಾಣೆಗಳಲ್ಲೂ ನಾಗರ ಪಂಚಮಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>