<p><strong>ಮಡಿಕೇರಿ:</strong> ಚೆಟ್ಟಳ್ಳಿಯಲ್ಲಿ ಷಷ್ಠಿಯ ಒಂದು ದಿನದ ಮುಂಚಿತವಾಗಿ ನಾಗರ ಪಂಚಮಿಯನ್ನು ಹಲವೆಡೆ ಪೂಜಿಸಲಾಯಿತು. ವಾರ್ಷಿಕ ನಾಗರ ಪಂಚಮಿಯನ್ನು ಶ್ರದ್ದಾಭಕ್ತಿಯಿಂದ ಅಚರಿಸಲಾಯಿತು.</p>.<p>ಬೆಳಿಗ್ಗೆ 7.30ಕ್ಕೆ ಅರ್ಚಕರಾದ ರಾಧಕೃಷ್ಣ ಭಟ್ ಅವರು ಪುತ್ತರಿರ ಐನ್ ಮನೆಯ ಸಮೀಪದ ಪುರಾತನ ನಾಗನೆಲೆಯನ್ನು ಶುದ್ಧಗೊಳಿದರು. ಹೂವು, ಹಣ್ಣು ಪಾಯಸದ ಅರ್ಪಣೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಲಾಯಿತು.</p>.<p>ವರ್ಷಂಪ್ರತಿ ಪಂಚಮಿಯಂದು ನಾಗನೆಲೆಯಲ್ಲಿ ಪೂಜೆ ಸಲ್ಲಿಸಲಾಗುತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಅವರು ಬೇಡಿಕೊಂಡರು. ನಂತರ, ಪ್ರಸಾದ ವಿತರಣೆ ನೆರವೇರಿತು.</p>.<p class="Subhead">ಓಂಕಾರೇಶ್ವರ ದೇವಾಲಯದಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ</p>.<p>ಇಲ್ಲಿನ ಓಂಕಾರೇಶ್ವರ ದೇವಾಲಯದಲ್ಲಿ ನ. 26ರಂದು ‘ಶ್ರೀ ಸುಬ್ರಹ್ಮಣ್ಯ ಷಷ್ಠಿ’ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಂತರ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಲಿದೆ.</p>.<p class="Subhead">ಮುತ್ತಪ್ಪ ದೇವಾಲಯದಲ್ಲಿ:</p>.<p>ಇಲ್ಲಿನ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಸುಬ್ರಹ್ಮಣ್ಯ ಗುಡಿಯಲ್ಲಿ ನ. 26ರಂದು ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆಯಿಂದಲೆ ವಿಶೇಷ ಅಭಿಷೇಕಗಳು, ಸೇವೆಗಳು ನಡೆಯಲಿದ್ದು, ನಂತರ ವಿವಿಧ ವೆಳ್ಳಾಟಂಗಳು ಜರುಗಲಿವೆ. ಮಧ್ಯಾಹ್ನ ಅನ್ನದಾನ ಇರಲಿದೆ.</p>.<p>ಸಂಜೆ ಭಜನೆ, ರಂಗಪೂಜೆ ಇರಲಿದ್ದು, ಅನ್ನದಾನವೂ ಇರಲಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.</p>.<p>ಇದಲ್ಲದೇ ಮಡಿಕೇರಿಯ ವಿವಿಧ ದೇಗುಲಗಳು, ರಾಣಿಪೇಟೆಯಲ್ಲಿರುವ ನಾಗಸ್ಥಾನ, ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆಗಳು ನಡೆಯಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈಗಾಗಲೇ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಚೆಟ್ಟಳ್ಳಿಯಲ್ಲಿ ಷಷ್ಠಿಯ ಒಂದು ದಿನದ ಮುಂಚಿತವಾಗಿ ನಾಗರ ಪಂಚಮಿಯನ್ನು ಹಲವೆಡೆ ಪೂಜಿಸಲಾಯಿತು. ವಾರ್ಷಿಕ ನಾಗರ ಪಂಚಮಿಯನ್ನು ಶ್ರದ್ದಾಭಕ್ತಿಯಿಂದ ಅಚರಿಸಲಾಯಿತು.</p>.<p>ಬೆಳಿಗ್ಗೆ 7.30ಕ್ಕೆ ಅರ್ಚಕರಾದ ರಾಧಕೃಷ್ಣ ಭಟ್ ಅವರು ಪುತ್ತರಿರ ಐನ್ ಮನೆಯ ಸಮೀಪದ ಪುರಾತನ ನಾಗನೆಲೆಯನ್ನು ಶುದ್ಧಗೊಳಿದರು. ಹೂವು, ಹಣ್ಣು ಪಾಯಸದ ಅರ್ಪಣೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಲಾಯಿತು.</p>.<p>ವರ್ಷಂಪ್ರತಿ ಪಂಚಮಿಯಂದು ನಾಗನೆಲೆಯಲ್ಲಿ ಪೂಜೆ ಸಲ್ಲಿಸಲಾಗುತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಅವರು ಬೇಡಿಕೊಂಡರು. ನಂತರ, ಪ್ರಸಾದ ವಿತರಣೆ ನೆರವೇರಿತು.</p>.<p class="Subhead">ಓಂಕಾರೇಶ್ವರ ದೇವಾಲಯದಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ</p>.<p>ಇಲ್ಲಿನ ಓಂಕಾರೇಶ್ವರ ದೇವಾಲಯದಲ್ಲಿ ನ. 26ರಂದು ‘ಶ್ರೀ ಸುಬ್ರಹ್ಮಣ್ಯ ಷಷ್ಠಿ’ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಂತರ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಲಿದೆ.</p>.<p class="Subhead">ಮುತ್ತಪ್ಪ ದೇವಾಲಯದಲ್ಲಿ:</p>.<p>ಇಲ್ಲಿನ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಸುಬ್ರಹ್ಮಣ್ಯ ಗುಡಿಯಲ್ಲಿ ನ. 26ರಂದು ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆಯಿಂದಲೆ ವಿಶೇಷ ಅಭಿಷೇಕಗಳು, ಸೇವೆಗಳು ನಡೆಯಲಿದ್ದು, ನಂತರ ವಿವಿಧ ವೆಳ್ಳಾಟಂಗಳು ಜರುಗಲಿವೆ. ಮಧ್ಯಾಹ್ನ ಅನ್ನದಾನ ಇರಲಿದೆ.</p>.<p>ಸಂಜೆ ಭಜನೆ, ರಂಗಪೂಜೆ ಇರಲಿದ್ದು, ಅನ್ನದಾನವೂ ಇರಲಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.</p>.<p>ಇದಲ್ಲದೇ ಮಡಿಕೇರಿಯ ವಿವಿಧ ದೇಗುಲಗಳು, ರಾಣಿಪೇಟೆಯಲ್ಲಿರುವ ನಾಗಸ್ಥಾನ, ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆಗಳು ನಡೆಯಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈಗಾಗಲೇ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>