<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p><p>ಇಲ್ಲಿನ ಮುತ್ತಪ್ಪ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾದವು. ಕ್ಷೀರಾಭಿಷೇಕ, ಎಳನೀರಿನ ಅಭಿಷೇಕ ಹಾಗೂ ಬಹಳ ವಿಶೇಷವಾದ ಶೇಷಸೇವೆಯೂ ಇಲ್ಲಿ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿತು. ಹರಕೆ ಹೊತ್ತವರು ತಮ್ಮ ಹರಕೆಗಳನ್ನು ಸಲ್ಲಿಸಿದರು. ಪ್ರಸಾದ ವಿನಿಯೋಗವೂ ನಡೆಯಿತು.</p><p>ಅರ್ಚಕರಾದ ಅರವಿಂದ ಭಟ್, ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ಪೂಜಾಕೈಂಕರ್ಯಗಳು ನಡೆದವು. ಮುತ್ತಪ್ಪ ದೇಗುಲ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್, ಸಹ ಕಾರ್ಯದರ್ಶಿ ಆರಾಧಾನ ಗಿರೀಶ, ಭಾಗವಹಿಸಿದ್ದರು. ಸುಮಾರು ಸಾವಿರಕ್ಕೂ ಅಧಿಕ ಮಂದಿ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು.</p>.<p>ಇಲ್ಲಿನ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಅಶ್ವತ್ಥ ಕಟ್ಟೆ ಹಾಗೂ ವಿವಿಧ ದೇಗುಲಗಳಲ್ಲಿನ ನಾಗರಕಲ್ಲುಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಮುತ್ತಪ್ಪ, ಅಯ್ಯಪ್ಪ ದೇವಾಲಯದಲ್ಲಿ ನಾಗರ ಪಂಚಮಿ</p>.<p>ಸೋಮವಾರಪೇಟೆ: ಇಲ್ಲಿನ ಮುತ್ತಪ್ಪ ಮತ್ತು ಅಯ್ಯಪ್ಪ ದೇವಾಲಯದ ಆವರಣದಲ್ಲಿ ನಾಗರ ಪಂಚಮಿ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆಗಳು ನಡೆದವು.</p>.<p>ದೇವಾಲಯದ ಆವರಣದಲ್ಲಿರುವ ನಾಗರ ಬನದಲ್ಲಿ ಬೆಳಿಗ್ಗೆ ಎಳನೀರು, ಹರಿಶಿಣ, ಹಾಲು ಅಭಿಷೇಕ, ಹೂವಿನ ಅಲಂಕಾರ ಮಹಾಮಂಗಳಾರತಿ ನಡೆಯಿತು.</p>.<p>ಅರ್ಚಕರಾದ ಮಣಿಕಂಠ ನಂಬೂದರಿ ಅವರು ಎಲ್ಲ ಪೂಜಾ ಕಾರ್ಯವನ್ನು ನಡೆಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p><p>ಇಲ್ಲಿನ ಮುತ್ತಪ್ಪ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾದವು. ಕ್ಷೀರಾಭಿಷೇಕ, ಎಳನೀರಿನ ಅಭಿಷೇಕ ಹಾಗೂ ಬಹಳ ವಿಶೇಷವಾದ ಶೇಷಸೇವೆಯೂ ಇಲ್ಲಿ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿತು. ಹರಕೆ ಹೊತ್ತವರು ತಮ್ಮ ಹರಕೆಗಳನ್ನು ಸಲ್ಲಿಸಿದರು. ಪ್ರಸಾದ ವಿನಿಯೋಗವೂ ನಡೆಯಿತು.</p><p>ಅರ್ಚಕರಾದ ಅರವಿಂದ ಭಟ್, ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ಪೂಜಾಕೈಂಕರ್ಯಗಳು ನಡೆದವು. ಮುತ್ತಪ್ಪ ದೇಗುಲ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್, ಸಹ ಕಾರ್ಯದರ್ಶಿ ಆರಾಧಾನ ಗಿರೀಶ, ಭಾಗವಹಿಸಿದ್ದರು. ಸುಮಾರು ಸಾವಿರಕ್ಕೂ ಅಧಿಕ ಮಂದಿ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು.</p>.<p>ಇಲ್ಲಿನ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಅಶ್ವತ್ಥ ಕಟ್ಟೆ ಹಾಗೂ ವಿವಿಧ ದೇಗುಲಗಳಲ್ಲಿನ ನಾಗರಕಲ್ಲುಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.</p>.<p>ಮುತ್ತಪ್ಪ, ಅಯ್ಯಪ್ಪ ದೇವಾಲಯದಲ್ಲಿ ನಾಗರ ಪಂಚಮಿ</p>.<p>ಸೋಮವಾರಪೇಟೆ: ಇಲ್ಲಿನ ಮುತ್ತಪ್ಪ ಮತ್ತು ಅಯ್ಯಪ್ಪ ದೇವಾಲಯದ ಆವರಣದಲ್ಲಿ ನಾಗರ ಪಂಚಮಿ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆಗಳು ನಡೆದವು.</p>.<p>ದೇವಾಲಯದ ಆವರಣದಲ್ಲಿರುವ ನಾಗರ ಬನದಲ್ಲಿ ಬೆಳಿಗ್ಗೆ ಎಳನೀರು, ಹರಿಶಿಣ, ಹಾಲು ಅಭಿಷೇಕ, ಹೂವಿನ ಅಲಂಕಾರ ಮಹಾಮಂಗಳಾರತಿ ನಡೆಯಿತು.</p>.<p>ಅರ್ಚಕರಾದ ಮಣಿಕಂಠ ನಂಬೂದರಿ ಅವರು ಎಲ್ಲ ಪೂಜಾ ಕಾರ್ಯವನ್ನು ನಡೆಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>