<p><strong>ಮೈಸೂರು</strong>: ಹತ್ತನೇ ತರಗತಿ ಪಠ್ಯಪುಸ್ತಕದಲ್ಲಿ ಅಳವಡಿಸಲಾದ ವಿಷಯದ ಆಳ ಮತ್ತು ಅರ್ಥ ತಿಳಿಯದೇ ಮಾತನಾಡುವವರು ರಾಷ್ಟ್ರ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.</p>.<p>ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ಕೊಡಬೇಕಿದೆ. ದೇಶಭಕ್ತಿಯನ್ನು ಉದ್ದೀಪನಗೊಳಿಸುವಂತಹ ಪಾಠಗಳನ್ನು ಅಳವಡಿಸಲಾಗಿದೆ. ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ ಅವರನ್ನೇ ಕುರಿತ ಪಾಠ ಸೇರಿಸಿಲ್ಲ.</p>.<p>ಆದರ್ಶ ವ್ಯಕ್ತಿಗಳು ಯಾರು ಎಂದು ಅವರು ಬರೆದ ಭಾಷಣ ಸೇರಿಸಲಾಗಿದೆ. ಯಾರು ಬರೆದಿದ್ದಾರೆ ಎಂಬುದು ಮುಖ್ಯವಲ್ಲ. ಅದರಲ್ಲಿರುವ ವಿಷಯ ಎಷ್ಟು ಮಹತ್ವದ್ದು ಎಂಬುದು ಮುಖ್ಯ ಎಂದು ಪ್ರತಿಪಾದಿಸಿದರು.</p>.<p>ಹಿಂದೆಯೂ ಶಾಲೆಗಳಲ್ಲಿ ಸರಸ್ವತಿ ಪೂಜೆ, ಭಜನೆಗಳು ಇದ್ದವು. ಆಗ ಕೇಸರೀಕರಣ ಕಾಣಲಿಲ್ಲ. ಈಗ ಕೇಸರೀಕರಣದ ಹುಳುಕನ್ನು ಹುಡುಕಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಹತ್ತನೇ ತರಗತಿ ಪಠ್ಯಪುಸ್ತಕದಲ್ಲಿ ಅಳವಡಿಸಲಾದ ವಿಷಯದ ಆಳ ಮತ್ತು ಅರ್ಥ ತಿಳಿಯದೇ ಮಾತನಾಡುವವರು ರಾಷ್ಟ್ರ ವಿರೋಧಿಗಳು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.</p>.<p>ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ಕೊಡಬೇಕಿದೆ. ದೇಶಭಕ್ತಿಯನ್ನು ಉದ್ದೀಪನಗೊಳಿಸುವಂತಹ ಪಾಠಗಳನ್ನು ಅಳವಡಿಸಲಾಗಿದೆ. ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ ಅವರನ್ನೇ ಕುರಿತ ಪಾಠ ಸೇರಿಸಿಲ್ಲ.</p>.<p>ಆದರ್ಶ ವ್ಯಕ್ತಿಗಳು ಯಾರು ಎಂದು ಅವರು ಬರೆದ ಭಾಷಣ ಸೇರಿಸಲಾಗಿದೆ. ಯಾರು ಬರೆದಿದ್ದಾರೆ ಎಂಬುದು ಮುಖ್ಯವಲ್ಲ. ಅದರಲ್ಲಿರುವ ವಿಷಯ ಎಷ್ಟು ಮಹತ್ವದ್ದು ಎಂಬುದು ಮುಖ್ಯ ಎಂದು ಪ್ರತಿಪಾದಿಸಿದರು.</p>.<p>ಹಿಂದೆಯೂ ಶಾಲೆಗಳಲ್ಲಿ ಸರಸ್ವತಿ ಪೂಜೆ, ಭಜನೆಗಳು ಇದ್ದವು. ಆಗ ಕೇಸರೀಕರಣ ಕಾಣಲಿಲ್ಲ. ಈಗ ಕೇಸರೀಕರಣದ ಹುಳುಕನ್ನು ಹುಡುಕಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>