<p><strong>ಶನಿವಾರಸಂತೆ:</strong> ಸಮೀಪದ ಕೊಡ್ಲಿಪೇಟೆಯಿಂದ ಅರ್ಧ ಕಿ.ಮೀ ದೂರದಲ್ಲಿರುವ ನಂದಿಪುರ ಗ್ರಾಮದಲ್ಲಿ 10 ವರ್ಷಗಳ ಹಿಂದೆ ಬೆಳಕಿಗೆ ಬಂದ ಉದ್ಭವ ಶ್ರೀ ಪ್ರಸನ್ನ ಬಂಡೆ ಆಂಜನೇಯಸ್ವಾಮಿಗೆ ಇದೀಗ ಭಕ್ತರು ₹20 ಲಕ್ಷ ವೆಚ್ಚದಲ್ಲಿ ಸುಂದರ ದೇಗುಲ ನಿರ್ಮಿಸಿದ್ದಾರೆ.</p>.<p>ಹಿನ್ನೆಲೆ: ನಂದಿಪುರ ಗ್ರಾಮದ ಕಾಲುದಾರಿಯ ಬಳಿ ಕೆಸರಿನ ನಡುವೆ ಬಂಡೆಯೊಂದಿತ್ತು. ಒಮ್ಮೆ ಬಂಡೆಯ ಸಮೀಪ ಮಗುವಿನೊಂದಿಗೆ ಬಂದ ಮಹಿಳೆಯೊಬ್ಬರು ದೀಪ ಹಚ್ಚಲು ಪರದಾಡುತ್ತಿದ್ದ ದೃಶ್ಯ ಬೆಳೆಗಾರ ಪ್ರವೀಣ್ ಎಂಬುವವರ ಗಮನಕ್ಕೆ ಬಂತು. ಸ್ಥಳಕ್ಕೆ ಬಂದು ಗಮನಿಸಿದಾಗ ಬಂಡೆಯಲ್ಲಿ ಆಂಜನೇಯನ ಕೆತ್ತನೆ ಅಸ್ಪಷ್ಟವಾಗಿ ಕಾಣಿಸಿತು.</p>.<p>ಕೆಲ ದಿನಗಳ ಬಳಿಕ ಪ್ರವೀಣ್ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಬಂಡೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಬಂಡೆಯ ಮೇಲೆ ಚಿಕ್ಕ ಗುಡಿಯೊಂದನ್ನು ನಿರ್ಮಿಸಿದರು. ಭಕ್ತರಿಂದ ಪೂಜೆ, ಪುನಸ್ಕಾರ ಆರಂಭವಾದವು.<br />ನಂತರ ಬಂಡೆಯ ಮೇಲೆ ಅಸ್ಪಷ್ಟವಾಗಿದ್ದ ಒಂದೂವರೆ ಅಡಿ ಎತ್ತರದ ಆಂಜನೇಯಮೂರ್ತಿ ಸ್ಪಷ್ಟವಾಗಿ ಕಾಣಿಸಿತು. ಅಂದಿನಿಂದ ಪ್ರತಿ ವರ್ಷ ಹನುಮ ಜಯಂತಿಯಂದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ ಎಂದು ಗ್ರಾಮದ ಮುಖಂಡರು<br />ಹೇಳುತ್ತಾರೆ.</p>.<p>ಕೊಡ್ಲಿಪೇಟೆಯ ಪ್ರಸಿದ್ಧ ಶಿಲ್ಪಿ ವರಪ್ರಸಾದ್ ದೇವಾಲಯಕ್ಕೆ ಭೇಟಿ ನೀಡಿ, ಎತ್ತರದ ಹನುಮ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಂಕಲ್ಪ ಮಾಡಿದರು. ಹೆಗ್ಗಡದೇವನ ಕೋಟೆಯಿಂದ ತಂದ ಏಕ ಶಿಲೆಯಲ್ಲಿ12.5 ಅಡಿ ಎತ್ತರದ ಆಂಜನೇಯನ ಮೂರ್ತಿ ಕೆತ್ತಿದರು. ಇದೀಗ ಏಕಶಿಲಾ ಮೂರ್ತಿಯು ಆಕರ್ಷಣೆಯ ಕೇಂದ್ರವಾಗಿದೆ.</p>.<p>ಆಂಜನೇಯಸ್ವಾಮಿ ಉದ್ಭವ ಆಗಿರುವ ಬಂಡೆಯ ಮೇಲೆ ನೂತನ ದೇಗುಲ ನಿರ್ಮಾಣವಾಗಿದ್ದು, ನೀರು, ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ತಮ ರಸ್ತೆ ಸಂಪರ್ಕ ಹಾಗೂ ವಾಹನ ನಿಲುಗಡೆಗೂ ಅವಕಾಶವಿದೆ.</p>.<p>ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6.30 ರಿಂದ 9.30 ಹಾಗೂ ಸಂಜೆ 6 ರಿಂದ 8.30ರವರೆಗೆ ಪೂಜೆ ನಡೆಯುತ್ತದೆ. ಕೊಡ್ಲಿಪೇಟೆ, ಶನಿವಾರಸಂತೆ ಮಾತ್ರವಲ್ಲದೇ ನೆರೆಯ ಹಾಸನ ಜಿಲ್ಲೆಯ ಯಸಳೂರು, ಕೆರೋಡಿ, ಐಗೂರು, ಶುಕ್ರವಾರಸಂತೆ ಇತರೆ ಊರುಗಳಿಂದಲೂ ಭಕ್ತರು ಬರುತ್ತಾರೆ.</p>.<p>‘ಉದ್ಭವ ಆಂಜನೇಯಸ್ವಾಮಿ ನೋಡಿದಾಗ ಏಕಶಿಲೆಯಲ್ಲಿ ಎತ್ತರದ ಹನುಮಮೂರ್ತಿಯನ್ನು ಕೆತ್ತಿ, ಪ್ರತಿಷ್ಠಾಪಿಸಬೇಕು ಎಂದುಕೊಂಡೆ. ಅಂದುಕೊಂಡಂತೆ ಎಲ್ಲವೂ ನೆರವೇರಿದೆ, ದೇವಾಲಯಕ್ಕೆ ಬರುವ ಭಕ್ತರನ್ನು ನೋಡಿ ಖುಷಿ ಆಗುತ್ತಿದೆ’ ಎಂದು ಕೊಡ್ಲಿಪೇಟೆ ಶಿಲ್ಪಿ ವರಪ್ರಸಾದ್ ಹೇಳುತ್ತಾರೆ.</p>.<p>ರಸ್ತೆ ಬದಿಯಲ್ಲೆ ದೇಗುಲವಿರುವ ಕಾರಣ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಯಾಣಿಕರು ದರ್ಶನ ಮಾಡಿ, ಪ್ರಾರ್ಥಿಸಿ ತೆರಳುತ್ತಾರೆ. ಆಡಳಿತ ಮಂಡಳಿ ವತಿಯಿಂದ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಈಚೆಗೆಮಂಡಲ ಪೂಜೆಯೂ ವಿಜೃಂಭಣೆಯಿಂದ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಸಮೀಪದ ಕೊಡ್ಲಿಪೇಟೆಯಿಂದ ಅರ್ಧ ಕಿ.ಮೀ ದೂರದಲ್ಲಿರುವ ನಂದಿಪುರ ಗ್ರಾಮದಲ್ಲಿ 10 ವರ್ಷಗಳ ಹಿಂದೆ ಬೆಳಕಿಗೆ ಬಂದ ಉದ್ಭವ ಶ್ರೀ ಪ್ರಸನ್ನ ಬಂಡೆ ಆಂಜನೇಯಸ್ವಾಮಿಗೆ ಇದೀಗ ಭಕ್ತರು ₹20 ಲಕ್ಷ ವೆಚ್ಚದಲ್ಲಿ ಸುಂದರ ದೇಗುಲ ನಿರ್ಮಿಸಿದ್ದಾರೆ.</p>.<p>ಹಿನ್ನೆಲೆ: ನಂದಿಪುರ ಗ್ರಾಮದ ಕಾಲುದಾರಿಯ ಬಳಿ ಕೆಸರಿನ ನಡುವೆ ಬಂಡೆಯೊಂದಿತ್ತು. ಒಮ್ಮೆ ಬಂಡೆಯ ಸಮೀಪ ಮಗುವಿನೊಂದಿಗೆ ಬಂದ ಮಹಿಳೆಯೊಬ್ಬರು ದೀಪ ಹಚ್ಚಲು ಪರದಾಡುತ್ತಿದ್ದ ದೃಶ್ಯ ಬೆಳೆಗಾರ ಪ್ರವೀಣ್ ಎಂಬುವವರ ಗಮನಕ್ಕೆ ಬಂತು. ಸ್ಥಳಕ್ಕೆ ಬಂದು ಗಮನಿಸಿದಾಗ ಬಂಡೆಯಲ್ಲಿ ಆಂಜನೇಯನ ಕೆತ್ತನೆ ಅಸ್ಪಷ್ಟವಾಗಿ ಕಾಣಿಸಿತು.</p>.<p>ಕೆಲ ದಿನಗಳ ಬಳಿಕ ಪ್ರವೀಣ್ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಬಂಡೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಬಂಡೆಯ ಮೇಲೆ ಚಿಕ್ಕ ಗುಡಿಯೊಂದನ್ನು ನಿರ್ಮಿಸಿದರು. ಭಕ್ತರಿಂದ ಪೂಜೆ, ಪುನಸ್ಕಾರ ಆರಂಭವಾದವು.<br />ನಂತರ ಬಂಡೆಯ ಮೇಲೆ ಅಸ್ಪಷ್ಟವಾಗಿದ್ದ ಒಂದೂವರೆ ಅಡಿ ಎತ್ತರದ ಆಂಜನೇಯಮೂರ್ತಿ ಸ್ಪಷ್ಟವಾಗಿ ಕಾಣಿಸಿತು. ಅಂದಿನಿಂದ ಪ್ರತಿ ವರ್ಷ ಹನುಮ ಜಯಂತಿಯಂದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ ಎಂದು ಗ್ರಾಮದ ಮುಖಂಡರು<br />ಹೇಳುತ್ತಾರೆ.</p>.<p>ಕೊಡ್ಲಿಪೇಟೆಯ ಪ್ರಸಿದ್ಧ ಶಿಲ್ಪಿ ವರಪ್ರಸಾದ್ ದೇವಾಲಯಕ್ಕೆ ಭೇಟಿ ನೀಡಿ, ಎತ್ತರದ ಹನುಮ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಂಕಲ್ಪ ಮಾಡಿದರು. ಹೆಗ್ಗಡದೇವನ ಕೋಟೆಯಿಂದ ತಂದ ಏಕ ಶಿಲೆಯಲ್ಲಿ12.5 ಅಡಿ ಎತ್ತರದ ಆಂಜನೇಯನ ಮೂರ್ತಿ ಕೆತ್ತಿದರು. ಇದೀಗ ಏಕಶಿಲಾ ಮೂರ್ತಿಯು ಆಕರ್ಷಣೆಯ ಕೇಂದ್ರವಾಗಿದೆ.</p>.<p>ಆಂಜನೇಯಸ್ವಾಮಿ ಉದ್ಭವ ಆಗಿರುವ ಬಂಡೆಯ ಮೇಲೆ ನೂತನ ದೇಗುಲ ನಿರ್ಮಾಣವಾಗಿದ್ದು, ನೀರು, ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಉತ್ತಮ ರಸ್ತೆ ಸಂಪರ್ಕ ಹಾಗೂ ವಾಹನ ನಿಲುಗಡೆಗೂ ಅವಕಾಶವಿದೆ.</p>.<p>ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6.30 ರಿಂದ 9.30 ಹಾಗೂ ಸಂಜೆ 6 ರಿಂದ 8.30ರವರೆಗೆ ಪೂಜೆ ನಡೆಯುತ್ತದೆ. ಕೊಡ್ಲಿಪೇಟೆ, ಶನಿವಾರಸಂತೆ ಮಾತ್ರವಲ್ಲದೇ ನೆರೆಯ ಹಾಸನ ಜಿಲ್ಲೆಯ ಯಸಳೂರು, ಕೆರೋಡಿ, ಐಗೂರು, ಶುಕ್ರವಾರಸಂತೆ ಇತರೆ ಊರುಗಳಿಂದಲೂ ಭಕ್ತರು ಬರುತ್ತಾರೆ.</p>.<p>‘ಉದ್ಭವ ಆಂಜನೇಯಸ್ವಾಮಿ ನೋಡಿದಾಗ ಏಕಶಿಲೆಯಲ್ಲಿ ಎತ್ತರದ ಹನುಮಮೂರ್ತಿಯನ್ನು ಕೆತ್ತಿ, ಪ್ರತಿಷ್ಠಾಪಿಸಬೇಕು ಎಂದುಕೊಂಡೆ. ಅಂದುಕೊಂಡಂತೆ ಎಲ್ಲವೂ ನೆರವೇರಿದೆ, ದೇವಾಲಯಕ್ಕೆ ಬರುವ ಭಕ್ತರನ್ನು ನೋಡಿ ಖುಷಿ ಆಗುತ್ತಿದೆ’ ಎಂದು ಕೊಡ್ಲಿಪೇಟೆ ಶಿಲ್ಪಿ ವರಪ್ರಸಾದ್ ಹೇಳುತ್ತಾರೆ.</p>.<p>ರಸ್ತೆ ಬದಿಯಲ್ಲೆ ದೇಗುಲವಿರುವ ಕಾರಣ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಯಾಣಿಕರು ದರ್ಶನ ಮಾಡಿ, ಪ್ರಾರ್ಥಿಸಿ ತೆರಳುತ್ತಾರೆ. ಆಡಳಿತ ಮಂಡಳಿ ವತಿಯಿಂದ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಈಚೆಗೆಮಂಡಲ ಪೂಜೆಯೂ ವಿಜೃಂಭಣೆಯಿಂದ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>