<p>ಕುಶಾಲನಗರ: ಇಲ್ಲಿನ ನಂಜರಾಯಪಟ್ಟಣ ಗ್ರಾಮದ ಪುರಾತನ ದೇವಾಲಯ ವಾಸ್ತುಶಿಲ್ಪಾಧಾರಿತ ನಂಜುಂಡೇಶ್ವರ ದೇವರ ವಾರ್ಷಿಕ ಉತ್ಸವ ಮತ್ತು ಜಾತ್ರೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.</p>.<p> ದೇವಾಲಯ ಸಮಿತಿಯಿಂದ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವದೊಂದಿಗೆ ಕನ್ನಂಬಾಡಿಯಮ್ಮ, ಬಸವೇಶ್ವರ ಹಾಗೂ ವೀರಭದೇಶ್ವರ ಸ್ವಾಮಿ ದೇವರ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p>.<p>ಮಂಗಳವಾರ ಸೂರ್ಯೋದಯಕ್ಕೂ ಮುನ್ನ ದೇವರಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.<br /> ನಂತರ ದುಬಾರೆ ಬಳಿ ಕಾವೇರಿ ನದಿಯಲ್ಲಿ ದೇವರ ವಿಗ್ರಹಗಳಿಗೆ ಗಂಗಾಸ್ನಾನ ಹಾಗೂ ಗಂಗಾಪೂಜೆ ನೆರವೇರಿಸಲಾಯಿತು.</p>.<p>ಬಳಿಕ ವಿವಿಧ ಪುಷ್ಪಗಳಿಂದ ಅಲಂಕೃತಗೊಂಡಿದ್ದ ಅಡ್ಡಪಲ್ಲಕ್ಕಿಯಲ್ಲಿ ದೇವರ ವಿಗ್ರಹ ಪ್ರತಿಷ್ಠಾಪಿಸಿ ಮಂಗಳಾರತಿ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದಲ್ಲಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬಸವಜ್ಯೋತಿ ಮಠದ ಅಪ್ಪಾಜಿ ಸ್ವಾಮೀಜಿ ಸ್ವಾಮಿ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಆಚರಣೆಗಳು ಹಾಗೂ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.</p>.<p>ಉತ್ಸವದ ಮೆರವಣಿಗೆ ಸಂದರ್ಭ ವೀರಭದ್ರೇಶ್ವರ ವೀರಗಾಸೆ ನೃತ್ಯ ನೆರೆದಿದ್ದ ಭಕ್ತರ ಗಮನ ಸೆಳೆಯಿತು. ಉತ್ಸವಗಳು ಬೆಂಕಿಕೊಂಡ ಹಾಯ್ದು ದೇವಾಲಯ ಪ್ರದಕ್ಷಿಣೆ ನಡೆಸಿದರು. ಅರ್ಚಕ ಎಸ್.ಪಿ.ಅಪ್ಪಣ್ಣ ದೇವರ ವಿಗ್ರಹಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ ಮಹಾ ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಿದರು.</p>.<p> ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಎನ್.ಕೆ.ಮೋಹನಕುಮಾರ್, ಉಪಾಧ್ಯಕ್ಷ ಕೆ.ಜಿ.ಲೋಕನಾಥ್, ಕಾರ್ಯದರ್ಶಿ ಕೆ.ವಿ.ಪ್ರೇಮಾನಂದ, ಸಹಕಾರ್ಯದರ್ಶಿ ಕೆ.ಎಸ್.ರತೀಶ್, ಖಜಾಂಚಿ ಮುರುಳಿ ಮಾದಯ್ಯ, ಪ್ರಮುಖರಾದ ಕೆ.ಸಿ.ಕಾರ್ಯಪ್ಪ, ಟಿ.ಕೆ.ರಘು, ಕೆ.ಪಿ.ಲೀಲಾವತಿ, ಬಿ.ಸಿ.ಕಾಳಯ್ಯ, ಆಶೀಶ್ ಅಪ್ಪಣ್ಣ, ಗ್ರಾ.ಪಂ.ಅಧ್ಯಕ್ಷ ಸಿ.ಎಲ್.ವಿಶ್ವ, ಮೊದಲಾದವರಿದ್ದರು.</p>.<p>ಪೂಜೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ಪುಷ್ಪಗಳಿಂದ ಹಾಗೂ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ನಂಜರಾಯಪಟ್ಟಣ ಸುತ್ತಲಿನ ಗಿರಿಜನ ಹಾಡಿಗಳಲ್ಲಿ ನೆಲೆಸಿರುವ ಗಿರಿಜನ ನಿವಾಸಿಗಳು ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು. ದೇವಾಲಯ ಸಮಿತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಇಲ್ಲಿನ ನಂಜರಾಯಪಟ್ಟಣ ಗ್ರಾಮದ ಪುರಾತನ ದೇವಾಲಯ ವಾಸ್ತುಶಿಲ್ಪಾಧಾರಿತ ನಂಜುಂಡೇಶ್ವರ ದೇವರ ವಾರ್ಷಿಕ ಉತ್ಸವ ಮತ್ತು ಜಾತ್ರೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.</p>.<p> ದೇವಾಲಯ ಸಮಿತಿಯಿಂದ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವದೊಂದಿಗೆ ಕನ್ನಂಬಾಡಿಯಮ್ಮ, ಬಸವೇಶ್ವರ ಹಾಗೂ ವೀರಭದೇಶ್ವರ ಸ್ವಾಮಿ ದೇವರ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.</p>.<p>ಮಂಗಳವಾರ ಸೂರ್ಯೋದಯಕ್ಕೂ ಮುನ್ನ ದೇವರಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.<br /> ನಂತರ ದುಬಾರೆ ಬಳಿ ಕಾವೇರಿ ನದಿಯಲ್ಲಿ ದೇವರ ವಿಗ್ರಹಗಳಿಗೆ ಗಂಗಾಸ್ನಾನ ಹಾಗೂ ಗಂಗಾಪೂಜೆ ನೆರವೇರಿಸಲಾಯಿತು.</p>.<p>ಬಳಿಕ ವಿವಿಧ ಪುಷ್ಪಗಳಿಂದ ಅಲಂಕೃತಗೊಂಡಿದ್ದ ಅಡ್ಡಪಲ್ಲಕ್ಕಿಯಲ್ಲಿ ದೇವರ ವಿಗ್ರಹ ಪ್ರತಿಷ್ಠಾಪಿಸಿ ಮಂಗಳಾರತಿ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದಲ್ಲಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬಸವಜ್ಯೋತಿ ಮಠದ ಅಪ್ಪಾಜಿ ಸ್ವಾಮೀಜಿ ಸ್ವಾಮಿ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಆಚರಣೆಗಳು ಹಾಗೂ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.</p>.<p>ಉತ್ಸವದ ಮೆರವಣಿಗೆ ಸಂದರ್ಭ ವೀರಭದ್ರೇಶ್ವರ ವೀರಗಾಸೆ ನೃತ್ಯ ನೆರೆದಿದ್ದ ಭಕ್ತರ ಗಮನ ಸೆಳೆಯಿತು. ಉತ್ಸವಗಳು ಬೆಂಕಿಕೊಂಡ ಹಾಯ್ದು ದೇವಾಲಯ ಪ್ರದಕ್ಷಿಣೆ ನಡೆಸಿದರು. ಅರ್ಚಕ ಎಸ್.ಪಿ.ಅಪ್ಪಣ್ಣ ದೇವರ ವಿಗ್ರಹಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ ಮಹಾ ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಿದರು.</p>.<p> ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಎನ್.ಕೆ.ಮೋಹನಕುಮಾರ್, ಉಪಾಧ್ಯಕ್ಷ ಕೆ.ಜಿ.ಲೋಕನಾಥ್, ಕಾರ್ಯದರ್ಶಿ ಕೆ.ವಿ.ಪ್ರೇಮಾನಂದ, ಸಹಕಾರ್ಯದರ್ಶಿ ಕೆ.ಎಸ್.ರತೀಶ್, ಖಜಾಂಚಿ ಮುರುಳಿ ಮಾದಯ್ಯ, ಪ್ರಮುಖರಾದ ಕೆ.ಸಿ.ಕಾರ್ಯಪ್ಪ, ಟಿ.ಕೆ.ರಘು, ಕೆ.ಪಿ.ಲೀಲಾವತಿ, ಬಿ.ಸಿ.ಕಾಳಯ್ಯ, ಆಶೀಶ್ ಅಪ್ಪಣ್ಣ, ಗ್ರಾ.ಪಂ.ಅಧ್ಯಕ್ಷ ಸಿ.ಎಲ್.ವಿಶ್ವ, ಮೊದಲಾದವರಿದ್ದರು.</p>.<p>ಪೂಜೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ಪುಷ್ಪಗಳಿಂದ ಹಾಗೂ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ನಂಜರಾಯಪಟ್ಟಣ ಸುತ್ತಲಿನ ಗಿರಿಜನ ಹಾಡಿಗಳಲ್ಲಿ ನೆಲೆಸಿರುವ ಗಿರಿಜನ ನಿವಾಸಿಗಳು ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು. ದೇವಾಲಯ ಸಮಿತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>