<p><strong>ನಾಪೋಕ್ಲು:</strong> ಹೋಬಳಿ ವ್ಯಾಪ್ತಿಯಲ್ಲಿ ಮಳೆ ಇಳಿಮುಖಗೊಂಡಿದ್ದು ಕಾವೇರಿ ನದಿ ತುಂಬಿ ಹರಿಯುತ್ತಿದೆ. ಜಲಾವೃತವಾಗಿದ್ದ ರಸ್ತೆ, ತಗ್ಗುಪ್ರದೇಶಗಳಲ್ಲಿ ಪ್ರವಾಹ ಇಳಿಕೆಯಾಗಿದೆ. ಸಂಚಾರ ಮುಕ್ತವಾಗಿವೆ.</p>.<p> ಬಲಮುರಿಯ ಕಿರು ಸೇತುವೆಯಲ್ಲಿ ಮಾತ್ರ ನೀರು ತುಂಬಿ ಹರಿಯುತ್ತಿದೆ.</p>.<p>ಬಿರುಸಿನ ಮಳೆಯಿಂದಾಗಿ ಸಮೀಪದ ಕಕ್ಕಬ್ಬೆಯಲ್ಲಿ ಕಕ್ಕಬ್ಬೆ ಹೊಳೆಯು ಮೈದುಂಬಿ ಹರಿದು ಕಕ್ಕಬ್ಬೆಯಿಂದ ತೆರಳುವ ಎಲ್ಲಾ ರಸ್ತೆಗಳು ಜಲಾವೃತಗೊಂಡಿದ್ದವು. ಕಕ್ಕಬ್ಬೆಯಿಂದ ಕುಂಜಿಲ ಪೈನರಿ ದರ್ಗಾಕ್ಕೆ ತೆರಳುವ ರಸ್ತೆ, ಪಾಡಿ ಇಗ್ಗುತ್ತಪ್ಪ ದೇವಾಲಯಕ್ಕೆ ತೆರಳುವ ರಸ್ತೆ, ನಾಪೋಕ್ಲು -ವಿರಾಜಪೇಟೆಗೆ ತೆರಳುವ ಮುಖ್ಯರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿತ್ತು.</p>.<p>ಮೂರ್ನಾಡು ರಸ್ತೆಯ ಬೊಳಿಬಾಣೆ ಬಳಿಯಲ್ಲಿ ಕಾವೇರಿ ನದಿ ಪ್ರವಾಹದಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದ ಬೊಳಿಬಾಣೆಯಲ್ಲಿ ಪ್ರವಾಹ ಇಳಿಕೆಯಾಗಿ ಸಂಪರ್ಕ ಸಾಧ್ಯವಾಗಿದೆ.ನಾಪೋಕ್ಲು- ಕೈಕಾಡು -ಪಾರಾಣೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ, ಕೈಕಾಡು ರಸ್ತೆಯಲ್ಲಿರುವ ಎತ್ತು ಕಡವು ಹೊಳೆ ರಸ್ತೆಯಲ್ಲಿ, ಬೇತು ಗ್ರಾಮದ ಮೂಲಕ ಬಲಮುರಿ ಗ್ರಾಮಕ್ಕೆ ಸಂಪರ್ಕಿಸುವ ಮಕ್ಕಿ ಕಡವು ಎಂಬಲ್ಲಿ ರಸ್ತೆಯಲ್ಲೂವಾಹನಸಂಚಾರಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಹೋಬಳಿ ವ್ಯಾಪ್ತಿಯಲ್ಲಿ ಮಳೆ ಇಳಿಮುಖಗೊಂಡಿದ್ದು ಕಾವೇರಿ ನದಿ ತುಂಬಿ ಹರಿಯುತ್ತಿದೆ. ಜಲಾವೃತವಾಗಿದ್ದ ರಸ್ತೆ, ತಗ್ಗುಪ್ರದೇಶಗಳಲ್ಲಿ ಪ್ರವಾಹ ಇಳಿಕೆಯಾಗಿದೆ. ಸಂಚಾರ ಮುಕ್ತವಾಗಿವೆ.</p>.<p> ಬಲಮುರಿಯ ಕಿರು ಸೇತುವೆಯಲ್ಲಿ ಮಾತ್ರ ನೀರು ತುಂಬಿ ಹರಿಯುತ್ತಿದೆ.</p>.<p>ಬಿರುಸಿನ ಮಳೆಯಿಂದಾಗಿ ಸಮೀಪದ ಕಕ್ಕಬ್ಬೆಯಲ್ಲಿ ಕಕ್ಕಬ್ಬೆ ಹೊಳೆಯು ಮೈದುಂಬಿ ಹರಿದು ಕಕ್ಕಬ್ಬೆಯಿಂದ ತೆರಳುವ ಎಲ್ಲಾ ರಸ್ತೆಗಳು ಜಲಾವೃತಗೊಂಡಿದ್ದವು. ಕಕ್ಕಬ್ಬೆಯಿಂದ ಕುಂಜಿಲ ಪೈನರಿ ದರ್ಗಾಕ್ಕೆ ತೆರಳುವ ರಸ್ತೆ, ಪಾಡಿ ಇಗ್ಗುತ್ತಪ್ಪ ದೇವಾಲಯಕ್ಕೆ ತೆರಳುವ ರಸ್ತೆ, ನಾಪೋಕ್ಲು -ವಿರಾಜಪೇಟೆಗೆ ತೆರಳುವ ಮುಖ್ಯರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿತ್ತು.</p>.<p>ಮೂರ್ನಾಡು ರಸ್ತೆಯ ಬೊಳಿಬಾಣೆ ಬಳಿಯಲ್ಲಿ ಕಾವೇರಿ ನದಿ ಪ್ರವಾಹದಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದ ಬೊಳಿಬಾಣೆಯಲ್ಲಿ ಪ್ರವಾಹ ಇಳಿಕೆಯಾಗಿ ಸಂಪರ್ಕ ಸಾಧ್ಯವಾಗಿದೆ.ನಾಪೋಕ್ಲು- ಕೈಕಾಡು -ಪಾರಾಣೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ, ಕೈಕಾಡು ರಸ್ತೆಯಲ್ಲಿರುವ ಎತ್ತು ಕಡವು ಹೊಳೆ ರಸ್ತೆಯಲ್ಲಿ, ಬೇತು ಗ್ರಾಮದ ಮೂಲಕ ಬಲಮುರಿ ಗ್ರಾಮಕ್ಕೆ ಸಂಪರ್ಕಿಸುವ ಮಕ್ಕಿ ಕಡವು ಎಂಬಲ್ಲಿ ರಸ್ತೆಯಲ್ಲೂವಾಹನಸಂಚಾರಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>