ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದೇಶಭಕ್ತಿ ಗೀತೆ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮೀಪದ ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ. ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು.