<p><strong>ನಾಪೋಕ್ಲು</strong>: ಗ್ರಾಮೀಣ ಪ್ರದೇಶದ ಹದಗೆಟ್ಟ ರಸ್ತೆಗಳಿಂದ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ಮಳೆಗಾಲ ಆರಂಭವಾಗಿದ್ದು, ಗುಂಡಿಬಿದ್ದ ರಸ್ತೆಗಳಿಂದ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಪಟ್ಟಣಕ್ಕೆ ಹೊಂದಿಕೊಂಡಂತಿರುವ ಬೇತು ಗ್ರಾಮದಿಂದ ತೋಟಗಾರಿಕಾ ಸಸ್ಯ ಕ್ಷೇತ್ರದ ಬಳಿಯ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.</p>.<p>ಮಡಿಕೇರಿಯ ಮುಖ್ಯರಸ್ತೆ ಸಂಪರ್ಕಿಸುವವರಿಗೆ ಇದು ಕಡಿಮೆ ಅಂತರದ ಮಾರ್ಗವಾಗಿದ್ದು, ಇಲ್ಲಿ ವಾಹನಗಳ ಓಡಾಟ ಹೆಚ್ಚು. ಆದರೆ ಈ ಕಿರು ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಹಲವರು ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯುದ್ದಕ್ಕೂ ಡಾಂಬರು ಕಿತ್ತು ಹೋಗಿದ್ದು, ಜಲ್ಲಿಗಳ ರಾಶಿಯೇ ಕಾಣುತ್ತಿದೆ.</p>.<p>ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯ.</p>.<p>ಇನ್ನು ನಾಪೋಕ್ಲು ಬಳಿಯ ಬೇತು-ಬಲಮುರಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಕ್ಕಬ್ಬೆ ಹೊಳೆಗೆ ಎತ್ತು ಕಡು ಸೇತುವೆ ನಿರ್ಮಾಣವಾದ ಬಳಿಕ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದೆ. ಪಟ್ಟಣದಿಂದ ಸಾಕಷ್ಟು ವಾಹನಗಳು ಬಲಮುರಿ ಮೂಲಕ ಮೂರ್ನಾಡು ಹಾಗೂ ಪಾರಾಣೆ ಮೂಲಕ ವಿರಾಜಪೇಟೆ ತಲುಪಲು ಈ ಮಾರ್ಗವನ್ನು ಬಳಸುತ್ತಿದ್ದಾರೆ.</p>.<p>ಈ ರಸ್ತೆಯ ಮಕ್ಕಿಶಾಸ್ತಾವು ದೇವಾಲಯದ ಬಳಿಯಿಂದ ಸೇತುವೆಯವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸೇತುವೆಯ ಬಳಿ ಕೆಸರುಮಯ ಸ್ಥಳದಲ್ಲಿ ಅನತಿದೂರ ಕಾಂಕ್ರಿಟ್ ರಸ್ತೆ ನಿರ್ಮಿಸಿ ಸರಿಪಡಿಸಲಾಗಿದೆ. ಇನ್ನುಳಿದ ಭಾಗದಲ್ಲಿ ಜಲ್ಲಿ ಕಲ್ಲುಗಳೇ ಇವೆ. ಈ ರಸ್ತೆಯ ಸ್ವಲ್ಪ ಭಾಗ ತಗ್ಗಿನಲ್ಲಿದ್ದು, ರಸ್ತೆಯ ಇಕ್ಕೆಲಗಳು ಗದ್ದೆಗಳಿಂದ ಆವೃತವಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆಯಲ್ಲಿ ಸಾಗುವುದು ಪ್ರಯಾಸಕರ. ಗ್ರಾಮ ಪಂಚಾಯಿತಿ ವತಿಯಿಂದ ಗದ್ದೆ ಬದಿಯಲ್ಲಿ ತೋಡು ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗಿದೆ. ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.</p>.<p>‘ಎತ್ತು ಕಡು ಸೇತುವೆಯ ಬಳಿ ಕಮಾನು ದ್ವಾರ ನಿರ್ಮಿಸಿ ಮಕ್ಕಿ ದೇವಾಲಯದ ರಸ್ತೆ ಎಂದು ಸೂಚನಾ ಫಲಕ ಅಳವಡಿಸಲಾಗುವುದು. ರಸ್ತೆ ಅಭಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬಾ ತಿಮ್ಮಯ್ಯ ತಿಳಿಸಿದರು.</p>.<p>ಪಟ್ಟಣದ ರಸ್ತೆಯೂ ಹಾಳಾಗಿದೆ. ಹಳೆ ಊರಿನ ಪೊನ್ನುಮುತ್ತಪ್ಪ ದೇವಾಲಯದ ಬಳಿ ರಸ್ತೆಗುಂಡಿ ಬಿದ್ದಿದೆ. ಅಪ್ಪಚ್ಚ ಕವಿ ರಸ್ತೆಯಲ್ಲೂ ಹೊಂಡಗಳಿವೆ. ಮಡಿಕೇರಿ-ಭಾಗಮಂಡಲ ಮುಖ್ಯ ರಸ್ತೆಯ ಬೆಟ್ಟಗೇರಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿವೆ. ಶೀಘ್ರ ರಸ್ತೆ ದುರಸ್ತಿ ಕೈಗೊಳ್ಳಬೇಕು. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ನಿರ್ಮಿಸಬೇಕು ಎಂದು ಬೆಟ್ಟಗೇರಿಯ ನಿವಾಸಿ ಕಾವೇರಪ್ಪ ಆಗ್ರಹಿಸಿದರು.</p>.<p>ಮಳೆಗಾಲದಲ್ಲಿ ಸಮಸ್ಯೆ ಉಲ್ಪಣವಾಗಲಿದೆ. ಶೀಘ್ರ ದುರಸ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p>Quote - ಬೇತು-ಬಲಮುರಿ ಗ್ರಾಮಗಳನ್ನು ಸಂಪರ್ಕಿಸುವ ತಗ್ಗುರಸ್ತೆಯನ್ನು ಎತ್ತರಿಸಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವುದು ಕಾಳೆಯಂಡ ಸಾಬಾ ತಿಮ್ಮಯ್ಯ ಗ್ರಾ.ಪಂ. ಸದಸ್ಯ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಗ್ರಾಮೀಣ ಪ್ರದೇಶದ ಹದಗೆಟ್ಟ ರಸ್ತೆಗಳಿಂದ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ಮಳೆಗಾಲ ಆರಂಭವಾಗಿದ್ದು, ಗುಂಡಿಬಿದ್ದ ರಸ್ತೆಗಳಿಂದ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.</p>.<p>ಪಟ್ಟಣಕ್ಕೆ ಹೊಂದಿಕೊಂಡಂತಿರುವ ಬೇತು ಗ್ರಾಮದಿಂದ ತೋಟಗಾರಿಕಾ ಸಸ್ಯ ಕ್ಷೇತ್ರದ ಬಳಿಯ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.</p>.<p>ಮಡಿಕೇರಿಯ ಮುಖ್ಯರಸ್ತೆ ಸಂಪರ್ಕಿಸುವವರಿಗೆ ಇದು ಕಡಿಮೆ ಅಂತರದ ಮಾರ್ಗವಾಗಿದ್ದು, ಇಲ್ಲಿ ವಾಹನಗಳ ಓಡಾಟ ಹೆಚ್ಚು. ಆದರೆ ಈ ಕಿರು ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಹಲವರು ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯುದ್ದಕ್ಕೂ ಡಾಂಬರು ಕಿತ್ತು ಹೋಗಿದ್ದು, ಜಲ್ಲಿಗಳ ರಾಶಿಯೇ ಕಾಣುತ್ತಿದೆ.</p>.<p>ಈ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯ.</p>.<p>ಇನ್ನು ನಾಪೋಕ್ಲು ಬಳಿಯ ಬೇತು-ಬಲಮುರಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಕ್ಕಬ್ಬೆ ಹೊಳೆಗೆ ಎತ್ತು ಕಡು ಸೇತುವೆ ನಿರ್ಮಾಣವಾದ ಬಳಿಕ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದೆ. ಪಟ್ಟಣದಿಂದ ಸಾಕಷ್ಟು ವಾಹನಗಳು ಬಲಮುರಿ ಮೂಲಕ ಮೂರ್ನಾಡು ಹಾಗೂ ಪಾರಾಣೆ ಮೂಲಕ ವಿರಾಜಪೇಟೆ ತಲುಪಲು ಈ ಮಾರ್ಗವನ್ನು ಬಳಸುತ್ತಿದ್ದಾರೆ.</p>.<p>ಈ ರಸ್ತೆಯ ಮಕ್ಕಿಶಾಸ್ತಾವು ದೇವಾಲಯದ ಬಳಿಯಿಂದ ಸೇತುವೆಯವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸೇತುವೆಯ ಬಳಿ ಕೆಸರುಮಯ ಸ್ಥಳದಲ್ಲಿ ಅನತಿದೂರ ಕಾಂಕ್ರಿಟ್ ರಸ್ತೆ ನಿರ್ಮಿಸಿ ಸರಿಪಡಿಸಲಾಗಿದೆ. ಇನ್ನುಳಿದ ಭಾಗದಲ್ಲಿ ಜಲ್ಲಿ ಕಲ್ಲುಗಳೇ ಇವೆ. ಈ ರಸ್ತೆಯ ಸ್ವಲ್ಪ ಭಾಗ ತಗ್ಗಿನಲ್ಲಿದ್ದು, ರಸ್ತೆಯ ಇಕ್ಕೆಲಗಳು ಗದ್ದೆಗಳಿಂದ ಆವೃತವಾಗಿದೆ.</p>.<p>ಮಳೆಗಾಲದಲ್ಲಿ ರಸ್ತೆಯಲ್ಲಿ ಸಾಗುವುದು ಪ್ರಯಾಸಕರ. ಗ್ರಾಮ ಪಂಚಾಯಿತಿ ವತಿಯಿಂದ ಗದ್ದೆ ಬದಿಯಲ್ಲಿ ತೋಡು ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗಿದೆ. ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.</p>.<p>‘ಎತ್ತು ಕಡು ಸೇತುವೆಯ ಬಳಿ ಕಮಾನು ದ್ವಾರ ನಿರ್ಮಿಸಿ ಮಕ್ಕಿ ದೇವಾಲಯದ ರಸ್ತೆ ಎಂದು ಸೂಚನಾ ಫಲಕ ಅಳವಡಿಸಲಾಗುವುದು. ರಸ್ತೆ ಅಭಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬಾ ತಿಮ್ಮಯ್ಯ ತಿಳಿಸಿದರು.</p>.<p>ಪಟ್ಟಣದ ರಸ್ತೆಯೂ ಹಾಳಾಗಿದೆ. ಹಳೆ ಊರಿನ ಪೊನ್ನುಮುತ್ತಪ್ಪ ದೇವಾಲಯದ ಬಳಿ ರಸ್ತೆಗುಂಡಿ ಬಿದ್ದಿದೆ. ಅಪ್ಪಚ್ಚ ಕವಿ ರಸ್ತೆಯಲ್ಲೂ ಹೊಂಡಗಳಿವೆ. ಮಡಿಕೇರಿ-ಭಾಗಮಂಡಲ ಮುಖ್ಯ ರಸ್ತೆಯ ಬೆಟ್ಟಗೇರಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿವೆ. ಶೀಘ್ರ ರಸ್ತೆ ದುರಸ್ತಿ ಕೈಗೊಳ್ಳಬೇಕು. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ನಿರ್ಮಿಸಬೇಕು ಎಂದು ಬೆಟ್ಟಗೇರಿಯ ನಿವಾಸಿ ಕಾವೇರಪ್ಪ ಆಗ್ರಹಿಸಿದರು.</p>.<p>ಮಳೆಗಾಲದಲ್ಲಿ ಸಮಸ್ಯೆ ಉಲ್ಪಣವಾಗಲಿದೆ. ಶೀಘ್ರ ದುರಸ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p>Quote - ಬೇತು-ಬಲಮುರಿ ಗ್ರಾಮಗಳನ್ನು ಸಂಪರ್ಕಿಸುವ ತಗ್ಗುರಸ್ತೆಯನ್ನು ಎತ್ತರಿಸಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವುದು ಕಾಳೆಯಂಡ ಸಾಬಾ ತಿಮ್ಮಯ್ಯ ಗ್ರಾ.ಪಂ. ಸದಸ್ಯ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>