ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರತೀಪ ಬಿ.ಎಂ, ಶಿವಚಾಳಿಯಂಡ ಜಗದೀಶ್, ಗ್ರಾಮಸ್ಥರಾದ ಪಾಡಿಯಮ್ಮoಡ ಮನು ಮಹೇಶ್ , ಕಂಗಂಡ ಜಾಲಿ ಪೂವಪ್ಪ,ಕುಂಬಂಡ ತಿಮ್ಮಯ್ಯ, ಕೊಂಬಂಡ ಧನಂಜಯ, ಪ್ರಕಾಶ್, ದರ್ಶನ್ ಇನ್ನಿತರರು ಮಳೆಯನ್ನು ಲೆಕ್ಕಿಸದೆ ಮನೆಗೆ ಬಿದ್ದ ಮರಗಳ ರೆಂಬೆ ಕೊಂಬೆಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು. ನಂತರ ಚಾವಣಿಗೆ ಶೀಟ್ ಹೊದಿಕೆ ಅಳವಡಿಸಿ ಮಾನವೀಯತೆ ಮೆರೆದರು. ಉಪತಹಶೀಲ್ದಾರ್ ಸುನಿಲ್ ಕುಮಾರ್, ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗೆ ಅಮೃತ ಭೇಟಿ ನೀಡಿ ಪರಿಶೀಲಿಸಿದರು.