<p><strong>ಮಡಿಕೇರಿ</strong>: ಭಾರತೀಯ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127ನೇ ಜಯಂತಿ ಪ್ರಯುಕ್ತ ಬುಧವಾರ ಇಲ್ಲಿನ ರೋಶನಾರದಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಯಿತು. ಅವರಿಗೆ ಪ್ರಿಯವಾಗಿದ್ದ ಗೀತಗಾಯನ ಕಾರ್ಯಕ್ರಮ ನಡೆಯಿತು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ನೆಚ್ಚಿನ ಮನೆಯಾಗಿದ್ದ ನಗರದ ಹೊರವಲಯದಲ್ಲಿನ ರೋಶನಾರ ಬಳಿಯಲ್ಲಿರುವ ಕಾರ್ಯಪ್ಪ ಅವರ ಸಮಾಧಿ ಸ್ಥಳಕ್ಕೆ ಹಲವು ಮಂದಿ ಪುಷ್ಪನಮನ ಸಲ್ಲಿಸಿದರು. ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಕಾರ್ಯಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತೆಗಳನ್ನು ಹಾಡಿದರು.</p>.<p>ಈ ವೇಳೆ ಮಾತನಾಡಿದ ಕಾರ್ಯಪ್ಪ ಅವರ ಪುತ್ರ ನಿವೃತ್ತ ಏರ್ ಮಾರ್ಷಲ್ ನಂದಾಕಾರ್ಯಪ್ಪ, ‘ಪ್ರತೀಯೊಬ್ಬ ಭಾರತೀಯನಿಗೂ ತನ್ನ ದೇಶ ಮೊದಲಾಗಬೇಕು. ಭಾರತೀಯತೆ ಆದ್ಯತೆಯಾಗಿರಬೇಕು. ಕೃತಕ ಬುದ್ದಿಮತ್ತೆಯ ಪ್ರಬಾವ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಮಾಧ್ಯಮಗಳಲ್ಲಿ ಬಂದದ್ದೆಲ್ಲಾ ನಿಜವಾಗಿರುವುದಿಲ್ಲ. ಯಾವುದೇ ವಿಚಾರಗಳನ್ನು ಪರಾಮರ್ಶಿಸಿ’ ಎಂದು ಕಿವಿಮಾತು ಹೇಳಿದರು.</p>.<p>‘ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಎಲ್ಲಾ ಸೌಲಭ್ಯಗಳೊಂದಿಗೆ ದೇಶಸೇವೆಗೆ ಪ್ರಾಮುಖ್ಯತೆ ನೀಡುವ ಭಾರತೀಯ ಸೇನಾ ಪಡೆಯಲ್ಲಿ ಕಾರ್ಯನಿರ್ವಹಿಸಲು ಆದ್ಯತೆ ನೀಡಿ’ ಎಂದೂ ಅವರು ಹೇಳಿದರು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪುತ್ರಿ ನಳಿನಿ ಕಾರ್ಯಪ್ಪ ಸಮಾಧಿ ಸ್ಥಳದಲ್ಲಿ ಜ್ಯೋತಿ ಬೆಳಗಿದರು. </p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೂಡಿಗೆ ಸೈನಿಕ ಶಾಲಾ ಕೆಡೆಟ್ ಧ್ರುವ್ ಭಾರದ್ವಜ್ ಅವರಿಗೆ ಕಾರ್ಯಪ್ಪ ಅವರ ಸೊಸೆ ಮೀನಾ ಕಾರ್ಯಪ್ಪ ಟ್ರೋಫಿ ಪ್ರದಾನ ಮಾಡಿದರು.</p>.<p>ಕೊಕ್ಕಲೇರ ಮಹತ್ವ ಅಪ್ಪಯ್ಯ ಅವರು ಕಾರ್ಯಪ್ಪ ಕುರಿತು ಮಾಹಿತಿ ನೀಡಿದರು. ಕಾರ್ಯಪ್ಪ ಅವರಿಗೆ ಪ್ರಿಯವಾಗಿದ್ದ ಹೇಳಿಕೆಗಳನ್ನು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ವಾಚಿಸಿದರು.</p>.<p>ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಗುರುದತ್, ನಿಯತಾ ದೇವಯ್ಯ, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ, ನಿವೃತ್ತ ಕರ್ನಲ್ ಬಿ.ಜಿ.ವಿ.ಕುಮಾರ್, ಕರ್ನಲ್ ಕಾವೇರಪ್ಪ ಪ್ರೇಮ್ ನಾಥ್, ಬಾಬು ಸೋಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಭಾರತೀಯ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127ನೇ ಜಯಂತಿ ಪ್ರಯುಕ್ತ ಬುಧವಾರ ಇಲ್ಲಿನ ರೋಶನಾರದಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಯಿತು. ಅವರಿಗೆ ಪ್ರಿಯವಾಗಿದ್ದ ಗೀತಗಾಯನ ಕಾರ್ಯಕ್ರಮ ನಡೆಯಿತು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ನೆಚ್ಚಿನ ಮನೆಯಾಗಿದ್ದ ನಗರದ ಹೊರವಲಯದಲ್ಲಿನ ರೋಶನಾರ ಬಳಿಯಲ್ಲಿರುವ ಕಾರ್ಯಪ್ಪ ಅವರ ಸಮಾಧಿ ಸ್ಥಳಕ್ಕೆ ಹಲವು ಮಂದಿ ಪುಷ್ಪನಮನ ಸಲ್ಲಿಸಿದರು. ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಕಾರ್ಯಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತೆಗಳನ್ನು ಹಾಡಿದರು.</p>.<p>ಈ ವೇಳೆ ಮಾತನಾಡಿದ ಕಾರ್ಯಪ್ಪ ಅವರ ಪುತ್ರ ನಿವೃತ್ತ ಏರ್ ಮಾರ್ಷಲ್ ನಂದಾಕಾರ್ಯಪ್ಪ, ‘ಪ್ರತೀಯೊಬ್ಬ ಭಾರತೀಯನಿಗೂ ತನ್ನ ದೇಶ ಮೊದಲಾಗಬೇಕು. ಭಾರತೀಯತೆ ಆದ್ಯತೆಯಾಗಿರಬೇಕು. ಕೃತಕ ಬುದ್ದಿಮತ್ತೆಯ ಪ್ರಬಾವ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಮಾಧ್ಯಮಗಳಲ್ಲಿ ಬಂದದ್ದೆಲ್ಲಾ ನಿಜವಾಗಿರುವುದಿಲ್ಲ. ಯಾವುದೇ ವಿಚಾರಗಳನ್ನು ಪರಾಮರ್ಶಿಸಿ’ ಎಂದು ಕಿವಿಮಾತು ಹೇಳಿದರು.</p>.<p>‘ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಎಲ್ಲಾ ಸೌಲಭ್ಯಗಳೊಂದಿಗೆ ದೇಶಸೇವೆಗೆ ಪ್ರಾಮುಖ್ಯತೆ ನೀಡುವ ಭಾರತೀಯ ಸೇನಾ ಪಡೆಯಲ್ಲಿ ಕಾರ್ಯನಿರ್ವಹಿಸಲು ಆದ್ಯತೆ ನೀಡಿ’ ಎಂದೂ ಅವರು ಹೇಳಿದರು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪುತ್ರಿ ನಳಿನಿ ಕಾರ್ಯಪ್ಪ ಸಮಾಧಿ ಸ್ಥಳದಲ್ಲಿ ಜ್ಯೋತಿ ಬೆಳಗಿದರು. </p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೂಡಿಗೆ ಸೈನಿಕ ಶಾಲಾ ಕೆಡೆಟ್ ಧ್ರುವ್ ಭಾರದ್ವಜ್ ಅವರಿಗೆ ಕಾರ್ಯಪ್ಪ ಅವರ ಸೊಸೆ ಮೀನಾ ಕಾರ್ಯಪ್ಪ ಟ್ರೋಫಿ ಪ್ರದಾನ ಮಾಡಿದರು.</p>.<p>ಕೊಕ್ಕಲೇರ ಮಹತ್ವ ಅಪ್ಪಯ್ಯ ಅವರು ಕಾರ್ಯಪ್ಪ ಕುರಿತು ಮಾಹಿತಿ ನೀಡಿದರು. ಕಾರ್ಯಪ್ಪ ಅವರಿಗೆ ಪ್ರಿಯವಾಗಿದ್ದ ಹೇಳಿಕೆಗಳನ್ನು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ವಾಚಿಸಿದರು.</p>.<p>ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾದ ಗುರುದತ್, ನಿಯತಾ ದೇವಯ್ಯ, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ, ನಿವೃತ್ತ ಕರ್ನಲ್ ಬಿ.ಜಿ.ವಿ.ಕುಮಾರ್, ಕರ್ನಲ್ ಕಾವೇರಪ್ಪ ಪ್ರೇಮ್ ನಾಥ್, ಬಾಬು ಸೋಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>