<p>ಸೋಮವಾರಪೇಟೆ: ಇಲ್ಲಿನ ಜೆಸಿಐ ಭಾರತ ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ (ನ್ಯಾಷನಲ್ ಲೆವಲ್ ಟ್ಯಾಲೆಂಟ್ ಸರ್ಚ್ ಎಕ್ಸಾಮಿನೇಷನ್) ಮಂಗಳವಾರ ಸಂತ ಜೊಸೇಫ್ರ ಪದವಿ ಕಾಲೇಜಿನಲ್ಲಿ ನಡೆಯಿತು.</p>.<p>ತಾಲ್ಲೂಕಿನ 14 ಶಾಲೆಗಳ 700ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರ ಮಟ್ಟದ ಈ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹ 40 ಸಾವಿರ, ದ್ವಿತೀಯ ₹ 20 ಸಾವಿರ, ತೃತೀಯ ₹ 10 ಸಾವಿರ ಮತ್ತು ಆಕರ್ಷಕ ಟ್ರೋಫಿಯನ್ನು ಜೆಸಿಐ ಭಾರತ ನೀಡುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ₹ 7500, ದ್ವಿತೀಯ ₹ 5000, ತೃತೀಯ ₹ 3000 ಮತ್ತು ಆಕರ್ಷಕ ಟ್ರೋಫಿಯನ್ನು ಜೆಸಿಐ ವಲಯ ಮಟ್ಟದಲ್ಲಿ ನೀಡಲಾಗುವುದು ಎಂದು ಪರೀಕ್ಷೆಯ ನೇತೃತ್ವ ವಹಿಸಿದ್ದ ಜೆಸಿಐ ಅಧ್ಯಕ್ಷೆ ಎಂ.ಎ. ರುಬೀನಾ ತಿಳಿಸಿದರು.</p>.<p>ಈ ಸಂದರ್ಭ ಜೆಸಿಐನ ಕಾರ್ಯದರ್ಶಿ ಜಗದಾಂಬಾ ಗುರುಪ್ರಸಾದ್, ಜೂನಿಯರ್ ಜೆಸಿ ಚೇರ್ ಪರ್ಸನ್ ರಿಶಾ, ಕೆ.ಎ. ಪ್ರಕಾಶ್, ವಿನುತ್ ಸುದೀಪ್, ರವಿಕುಮಾರ್, ನೆಲ್ಸನ್, ಲಿಕ್ಕಿ ವಿಕೇಶ್ ಮತ್ತು ಶಾಲೆಯ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಇಲ್ಲಿನ ಜೆಸಿಐ ಭಾರತ ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ (ನ್ಯಾಷನಲ್ ಲೆವಲ್ ಟ್ಯಾಲೆಂಟ್ ಸರ್ಚ್ ಎಕ್ಸಾಮಿನೇಷನ್) ಮಂಗಳವಾರ ಸಂತ ಜೊಸೇಫ್ರ ಪದವಿ ಕಾಲೇಜಿನಲ್ಲಿ ನಡೆಯಿತು.</p>.<p>ತಾಲ್ಲೂಕಿನ 14 ಶಾಲೆಗಳ 700ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರ ಮಟ್ಟದ ಈ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹ 40 ಸಾವಿರ, ದ್ವಿತೀಯ ₹ 20 ಸಾವಿರ, ತೃತೀಯ ₹ 10 ಸಾವಿರ ಮತ್ತು ಆಕರ್ಷಕ ಟ್ರೋಫಿಯನ್ನು ಜೆಸಿಐ ಭಾರತ ನೀಡುವುದು. ರಾಜ್ಯಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ₹ 7500, ದ್ವಿತೀಯ ₹ 5000, ತೃತೀಯ ₹ 3000 ಮತ್ತು ಆಕರ್ಷಕ ಟ್ರೋಫಿಯನ್ನು ಜೆಸಿಐ ವಲಯ ಮಟ್ಟದಲ್ಲಿ ನೀಡಲಾಗುವುದು ಎಂದು ಪರೀಕ್ಷೆಯ ನೇತೃತ್ವ ವಹಿಸಿದ್ದ ಜೆಸಿಐ ಅಧ್ಯಕ್ಷೆ ಎಂ.ಎ. ರುಬೀನಾ ತಿಳಿಸಿದರು.</p>.<p>ಈ ಸಂದರ್ಭ ಜೆಸಿಐನ ಕಾರ್ಯದರ್ಶಿ ಜಗದಾಂಬಾ ಗುರುಪ್ರಸಾದ್, ಜೂನಿಯರ್ ಜೆಸಿ ಚೇರ್ ಪರ್ಸನ್ ರಿಶಾ, ಕೆ.ಎ. ಪ್ರಕಾಶ್, ವಿನುತ್ ಸುದೀಪ್, ರವಿಕುಮಾರ್, ನೆಲ್ಸನ್, ಲಿಕ್ಕಿ ವಿಕೇಶ್ ಮತ್ತು ಶಾಲೆಯ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>