<p><strong>ಮಡಿಕೇರಿ</strong>: ಹಸಿರುಮಯ ಬೆಟ್ಟಗುಡ್ಡಗಳು ಹಾಗೂ ತಂಪು ತಂಗಾಳಿಯ ನಡುವೆ ಕರ್ನಾಟಕ ಲಲಿತಾ ಕಲಾ ಅಕಾಡೆಮಿಯ ರಾಷ್ಟ್ರೀಯ ಮಹಿಳಾ ಕಲಾಶಿಬಿರವು ಗುರುವಾರ ಇಲ್ಲಿ ಆರಂಭಗೊಂಡಿತು.</p>.<p>ನಗರ ಹೊರವಲಯದ ‘ದಿ ಕ್ಯಾಪಿಟಲ್ ವಿಲೇಜ್’ ರೆಸಾರ್ಟ್ನಲ್ಲಿ ಆರಂಭವಾದ ಶಿಬಿರದಲ್ಲಿ ಹೈದರಾಬಾದ್, ಗೋವಾ, ಮುಂಬಯಿ, ತಮಿಳುನಾಡು, ಬರೋಡಾ ಸೇರಿದಂತೆ ಹೊರರಾಜ್ಯ ಮತ್ತು ಕರ್ನಾಟಕದ 14ಕ್ಕೂ ಅಧಿಕ ಮಂದಿ ಕಲಾವಿದರು ಭಾಗಿಯಾಗಿದ್ದು ಕಲಾಕೃತಿಗಳ ರಚನೆಯಲ್ಲಿ ತೊಡಗಿದ್ದಾರೆ.</p>.<p>4 ದಿನಗಳ ಶಿಬಿರಕ್ಕೆ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಶಿಬಿರದ ಮೆರುಗು ಹೆಚ್ಚಿಸಿದವು.</p>.<p>ಈ ವೇಳೆ ಮಾತನಾಡಿದ ಪ.ಸ.ಕುಮಾರ್, ‘ಮುಂಬಯಿಯಲ್ಲಿರುವ ಜೆ.ಜೆ.ಚಿತ್ರಕಲೆ ಶಾಲೆಯ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಕಲಾ ಗ್ಯಾಲರಿ’ ಆರಂಭಿಸಬೇಕು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯನ್ನು ಪಠ್ಯದಲ್ಲೇ ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಹೇಶ್ ನಾಚಯ್ಯ ಮಾತನಾಡಿ, ‘ಕಲಾವಿದರಿಗೆ ಸ್ಫೂರ್ತಿ ನೀಡುವ ಪ್ರಕೃತಿ ಸಂಪತ್ತಿನ ನಡುವೆ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ. ವಿವಿಧ ರಾಜ್ಯಗಳ ಕಲಾವಿದರಿಗೆ ಇದೊಂದು ವಿಶೇಷ ಅನುಭವವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಿಬಿರವು ಮಾರ್ಚ್ 8 ರವರೆಗೆ ನಡೆಯಲಿದ್ದು, ಕಲಾಶಿಬಿರ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಹಸಿರುಮಯ ಬೆಟ್ಟಗುಡ್ಡಗಳು ಹಾಗೂ ತಂಪು ತಂಗಾಳಿಯ ನಡುವೆ ಕರ್ನಾಟಕ ಲಲಿತಾ ಕಲಾ ಅಕಾಡೆಮಿಯ ರಾಷ್ಟ್ರೀಯ ಮಹಿಳಾ ಕಲಾಶಿಬಿರವು ಗುರುವಾರ ಇಲ್ಲಿ ಆರಂಭಗೊಂಡಿತು.</p>.<p>ನಗರ ಹೊರವಲಯದ ‘ದಿ ಕ್ಯಾಪಿಟಲ್ ವಿಲೇಜ್’ ರೆಸಾರ್ಟ್ನಲ್ಲಿ ಆರಂಭವಾದ ಶಿಬಿರದಲ್ಲಿ ಹೈದರಾಬಾದ್, ಗೋವಾ, ಮುಂಬಯಿ, ತಮಿಳುನಾಡು, ಬರೋಡಾ ಸೇರಿದಂತೆ ಹೊರರಾಜ್ಯ ಮತ್ತು ಕರ್ನಾಟಕದ 14ಕ್ಕೂ ಅಧಿಕ ಮಂದಿ ಕಲಾವಿದರು ಭಾಗಿಯಾಗಿದ್ದು ಕಲಾಕೃತಿಗಳ ರಚನೆಯಲ್ಲಿ ತೊಡಗಿದ್ದಾರೆ.</p>.<p>4 ದಿನಗಳ ಶಿಬಿರಕ್ಕೆ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಶಿಬಿರದ ಮೆರುಗು ಹೆಚ್ಚಿಸಿದವು.</p>.<p>ಈ ವೇಳೆ ಮಾತನಾಡಿದ ಪ.ಸ.ಕುಮಾರ್, ‘ಮುಂಬಯಿಯಲ್ಲಿರುವ ಜೆ.ಜೆ.ಚಿತ್ರಕಲೆ ಶಾಲೆಯ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಕಲಾ ಗ್ಯಾಲರಿ’ ಆರಂಭಿಸಬೇಕು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯನ್ನು ಪಠ್ಯದಲ್ಲೇ ಅಳವಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಹೇಶ್ ನಾಚಯ್ಯ ಮಾತನಾಡಿ, ‘ಕಲಾವಿದರಿಗೆ ಸ್ಫೂರ್ತಿ ನೀಡುವ ಪ್ರಕೃತಿ ಸಂಪತ್ತಿನ ನಡುವೆ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ. ವಿವಿಧ ರಾಜ್ಯಗಳ ಕಲಾವಿದರಿಗೆ ಇದೊಂದು ವಿಶೇಷ ಅನುಭವವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಶಿಬಿರವು ಮಾರ್ಚ್ 8 ರವರೆಗೆ ನಡೆಯಲಿದ್ದು, ಕಲಾಶಿಬಿರ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>