ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಜ.12ರಂದು ರಾಷ್ಟ್ರೀಯ ಯುವ ದಿನ

Published 7 ಜನವರಿ 2024, 8:13 IST
Last Updated 7 ಜನವರಿ 2024, 8:13 IST
ಅಕ್ಷರ ಗಾತ್ರ

ಮಡಿಕೇರಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಜ. 12ರಂದು ಬೆಳಿಗ್ಗೆ 9.30ಕ್ಕೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ವತಿಯಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿದೆ.

ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‌ಗೌಡ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ತಿನ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕೋರನ ಸರಸ್ವತಿ ಪ್ರಕಾಶ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕರಿ ಎ.ನಾಗಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT