<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಸೋಮವಾರ ನವರಾತ್ರಿ ಉತ್ಸವ ಆರಂಭಗೊಂಡಿತು.</p><p>ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು. ಬಳಿಕ ಮಾತನಾಡಿದ ಅವರು, ನಾಡಿನ ಎಲ್ಲಾ ಜನರು ಶ್ರದ್ಧಾಭಕ್ತಿಯಿಂದ ಆಚರಿಸುವ ಈ ನವರಾತ್ರಿ ಉತ್ಸವದಂದು, ನಾಡಿನ ಸಮಸ್ತ ಜನರಿಗೆ ಆ ತಾಯಿಯ ಕೃಪಾಶೀರ್ವಾದ ದೊರೆಯಲಿ ಎಂದು ಹೇಳಿದರು. ನಮ್ಮ ಪುರಾತನ ಆಚರಣೆ ಹಾಗೂ ನಂಬಿಕೆಯಂತೆ, ಈ ನವರಾತ್ರಿಯ ಸಂದರ್ಭವು ಎಲ್ಲಾ ದುಷ್ಟ ಶಕ್ತಿಗಳನ್ನು ಹೋಗಲಾಡಿಸುವ ದೇವಿಯ ಅವತಾರವನ್ನು ಪೂಜಿಸುವ ದಿನವಾಗಿದೆ. ಆ ಶಕ್ತಿ ಮಾತೆಯು ನಾಡಿನ ಎಲ್ಲರಿಗೂ ಒಳಿತನ್ನು ಮಾಡಿ ದುಷ್ಟತನವನ್ನು ದೂರ ಮಾಡಿ ಸಮಾಜವು ಉತ್ತಮ ಬಾಂಧವ್ಯದೊಂದಿಗೆ ಮುಂದುವರೆಯುವಂತೆ ಹರಸಲಿ ಎಂದು ಹೇಳಿದರು.</p><p> ಈ ವೇಳೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ್ ಮಾಚಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಸೋಮವಾರ ನವರಾತ್ರಿ ಉತ್ಸವ ಆರಂಭಗೊಂಡಿತು.</p><p>ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು. ಬಳಿಕ ಮಾತನಾಡಿದ ಅವರು, ನಾಡಿನ ಎಲ್ಲಾ ಜನರು ಶ್ರದ್ಧಾಭಕ್ತಿಯಿಂದ ಆಚರಿಸುವ ಈ ನವರಾತ್ರಿ ಉತ್ಸವದಂದು, ನಾಡಿನ ಸಮಸ್ತ ಜನರಿಗೆ ಆ ತಾಯಿಯ ಕೃಪಾಶೀರ್ವಾದ ದೊರೆಯಲಿ ಎಂದು ಹೇಳಿದರು. ನಮ್ಮ ಪುರಾತನ ಆಚರಣೆ ಹಾಗೂ ನಂಬಿಕೆಯಂತೆ, ಈ ನವರಾತ್ರಿಯ ಸಂದರ್ಭವು ಎಲ್ಲಾ ದುಷ್ಟ ಶಕ್ತಿಗಳನ್ನು ಹೋಗಲಾಡಿಸುವ ದೇವಿಯ ಅವತಾರವನ್ನು ಪೂಜಿಸುವ ದಿನವಾಗಿದೆ. ಆ ಶಕ್ತಿ ಮಾತೆಯು ನಾಡಿನ ಎಲ್ಲರಿಗೂ ಒಳಿತನ್ನು ಮಾಡಿ ದುಷ್ಟತನವನ್ನು ದೂರ ಮಾಡಿ ಸಮಾಜವು ಉತ್ತಮ ಬಾಂಧವ್ಯದೊಂದಿಗೆ ಮುಂದುವರೆಯುವಂತೆ ಹರಸಲಿ ಎಂದು ಹೇಳಿದರು.</p><p> ಈ ವೇಳೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ್ ಮಾಚಯ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>