ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್ ಪರೀಕ್ಷೆ: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ಡಾ.ಶರಣಪ್ರಕಾಶ್ ಪಾಟೀಲ

Published : 6 ಜುಲೈ 2024, 6:05 IST
Last Updated : 6 ಜುಲೈ 2024, 6:05 IST
ಫಾಲೋ ಮಾಡಿ
Comments
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವುದು ಹಗರಣವೇ ಅಲ್ಲ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ
ಡಾ.ಆರ್.ಶರಣಪ್ರಕಾಶ್ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ
ಮಡಿಕೇರಿಯಲ್ಲಿ ದಿನಕ್ಕೆ 2 ಗಂಟೆ ನೀರು ಪೂರೈಕೆ!
ಮಡಿಕೇರಿ ಸಮೀಪದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಸಂವಾದ ನಡೆಸಿದ ವೇಳೆ ವಿದ್ಯಾರ್ಥಿನಿಯೊಬ್ಬರು ‘ಹಾಸ್ಟೆಲ್‌ನಲ್ಲಿ ದಿನಕ್ಕೆ 2 ಗಂಟೆ ಮಾತ್ರವೇ ನೀರು ಕೊಡುತ್ತಾರೆ. ನಾವು ಹೇಗೆ ಸಂಗ್ರಹಿಸಿಟ್ಟುಕೊಳ್ಳಬೇಕು ಎನ್ನುವುದಕ್ಕೆ ಸಲಹೆ ಕೊಡಿ’ ಎಂದು ಕೇಳಿದರು. ಇದನ್ನು ಕೇಳಿ ಮಡಿಕೇರಿಯಂತಹ ಊರಿನಲ್ಲಿ ಕುಡಿಯುವ ನೀರಿಗೂ ಸಮಸ್ಯೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದ ಸಚಿವರು ‘ಕೂಡಲೇ ಮತ್ತೊಂದು ಕೊಳವೆಬಾವಿ ಕೊರೆಸಿ 24 ಗಂಟೆಗಳ ಕಾಲ ನೀರು ಸರಬರಾಜು ಆಗುವಂತೆ ಕ್ರಮ ವಹಿಸಿ’ ಎಂದು ಸೂಚನೆ ನೀಡಿದರು. ನಂತರ ವಿದ್ಯಾರ್ಥಿಗಳು ಬೋಧಕರ ಕೊರತೆ ಸಮರ್ಪಕವಾಗಿ ಪಾವತಿಯಾಗದ ಶಿಷ್ಯವೇತನ ಶೌಚಾಲಯದ ಸಮಸ್ಯೆ ಬಸ್‌ಗಳ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳ ಸುರಿಮಳೆಗರೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT